ಸಿಲಿಗುರಿ: ಪಶ್ಚಿಮ ಬಂಗಾಳದಲ್ಲಿ ಭಾರತ ಜೋಡೊ ನ್ಯಾಯ ಯಾತ್ರೆಯ ಭಾಗವಾಗಿ ಕೆಲವು ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಅನುಮತಿ ಪಡೆಯುವಲ್ಲಿ ಕಾಂಗ್ರೆಸ್ ಪಕ್ಷವು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
ಸಿಲಿಗುರಿ: ಪಶ್ಚಿಮ ಬಂಗಾಳದಲ್ಲಿ ಭಾರತ ಜೋಡೊ ನ್ಯಾಯ ಯಾತ್ರೆಯ ಭಾಗವಾಗಿ ಕೆಲವು ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಅನುಮತಿ ಪಡೆಯುವಲ್ಲಿ ಕಾಂಗ್ರೆಸ್ ಪಕ್ಷವು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
ಸಿಲಿಗುರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವು ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಬಯಸಿದೆ, ಆದರೆ ಶಾಲಾ ಪರೀಕ್ಷೆಗಳ ಕಾರಣ ಅನುಮತಿ ಸಿಗುತ್ತಿಲ್ಲ ಎಂದರು.
'ಪರೀಕ್ಷೆಯ ಕಾರಣ ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ನಮಗೆ ಅನುಮತಿ ಸಿಗುತ್ತಿಲ್ಲ. ಭಾರತ ಜೋಡೊ ನ್ಯಾಯ ಯಾತ್ರೆಯು ಅಸ್ಸಾಂ ಸೇರಿದಂತೆ ಈಶಾನ್ಯದಲ್ಲಿ ಸಮಸ್ಯೆಗಳನ್ನು ಎದುರಿಸಿದೆ. ಈಗ ಟಿಎಂಸಿ ಆಡಳಿತದ ಪಶ್ಚಿಮ ಬಂಗಾಳದಲ್ಲಿ ಕೂಡ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಅವರು ಹೇಳಿದರು.
ಪಶ್ಚಿಮ ಬಂಗಾಳದ ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳಿಗೆ ಅನುಮತಿ ಸಿಗಬಹುದು ಎಂದು ನಾವು ಭಾವಿಸಿದ್ದೆವು. ಆದರೆ, ಆಡಳಿತವು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ ಎಂದು ಚೌಧರಿ ತಿಳಿಸಿದರು.
ಜನವರಿ 14ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರದಲ್ಲಿ ಪ್ರಾರಂಭಗೊಂಡ ಭಾರತ ಜೋಡೊ ನ್ಯಾಯ ಯಾತ್ರೆಯು ನಿನ್ನೆ (ಗುರುವಾರ) ಅಸ್ಸಾಂನಿಂದ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿತು. ಎರಡು ದಿನಗಳ ವಿರಾಮದ ನಂತರ ಯಾತ್ರೆಯು ಜನವರಿ 28ರಂದು ಪುನರಾರಂಭವಾಗಲಿದೆ.
'ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟ ಮುರಿದು ಬೀಳಲು ಅಧೀರ್ ಚೌಧರಿ ಕಾರಣ. ಎರಡನೆಯದಾಗಿ ರಾಜ್ಯದಲ್ಲಿ ಎಲ್ಲಾ ವಿರೋಧ ಪಕ್ಷಗಳು ಕಾರ್ಯಕ್ರಮಗಳನ್ನು ನಡೆಸುತ್ತವೆ. ಯಾರಿಗೂ ಯಾವುದೇ ಸಮಸ್ಯೆ ಎದುರಾಗಿಲ್ಲ. ಶಾಲೆಗಳಲ್ಲಿ ಬೋರ್ಡ್ ಪರೀಕ್ಷೆಗಳು ಇರುವುದರಿಂದ ಆಡಳಿತವು ಈ ನಿರ್ಧಾರ ತೆಗೆದುಕೊಂಡಿರಬೇಕು' ಎಂದು ಟಿಎಂಸಿ ಸಂಸದ ಶಾಂತನು ಸೆನ್ ಹೇಳಿದರು.