ಪೆರ್ಲ : ಇತಿಹಾಸ ಪ್ರಸಿದ್ಧ ಇಡಿಯಡ್ಕ ಶ್ರೀದುರ್ಗಾಪರಮೇಶ್ವರೀ ಉಳ್ಳಾಲ್ತಿ ವಿಷ್ಣುಮೂರ್ತಿ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಫೆ.1ರಿಂದ 5ರ ತನಕ ಜರಗಲಿದ್ದು ಇದರ ಆಮಂತ್ರಣ ಪತ್ರಿಕೆ ಬುಧವಾರ ಬಿಡುಗಡೆಗೊಳಿಸಲಾಯಿತು.
ಕ್ಷೇತ್ರ ಮುಂಭಾಗ ವಿಶೇಷ ಪ್ರಾರ್ಥನೆಯ ಬಳಿಕ ಶ್ರೀಧರ್ ಭಟ್ ಸಜಂಗದ್ದೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಕ್ಷೇತ್ರ ಅರ್ಚಕ ಕೃಷ್ಣರಾಜ ಪುಣಿಂಚಿತ್ತಾಯ, ಧ.ಗ್ರಾ.ಮಂಜೇಶ್ವರ ತಾಲೂಕು ಯೋಜನಾಧಿಕಾರಿ ಶಶಿಕಲ ಸುವರ್ಣ,ಮೇಲ್ವಿಚಾರಕಿ ಜಯಶ್ರೀ, ಸೇವಾ ಪ್ರತಿನಿಧಿಗಳು, ಕ್ಷೇತ್ರ ಆಡಳಿತ ಸಮಿತಿ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣ ಸಮಿತಿ ಸದಸ್ಯರು ಭಾಗವಹಿಸಿದ್ದರು.