ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ `ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯ, ನೀರ್ಚಾಲು ಹಳೆಮನೆ ಈಶ್ವರ ಭಟ್ ಹೆಚ್ ಅವರ ಆಂಜಿಯೋಪ್ಲ್ಯಾಸ್ಟಿ ಹೃದಯ ಚಿಕಿತ್ಸೆಗೆ ಸಹಾಯಧನದ ಮೊತ್ತ ರೂ.50,000 ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ ಪದ್ಮರಾಜ್ ಪಟ್ಟಾಜೆ ಅವರು ಗುರುವಾರ ಹಸ್ತಾಂತರಿಸಿದರು. ಈ ಸಂದಭರ್Àದಲ್ಲಿ ಕ್ಯಾಂಪ್ಕೋ ಬದಿಯಡ್ಕ ಪ್ರಾಂತೀಯ ಪ್ರಬಂಧಕ ಗಿರೀಶ್ ಇ, ಬದಿಯಡ್ಕ ಶಾಖೆಯ ಪ್ರಬಂಧಕ ದಿನೇಶ್ ಕುಮಾರ್ ಕೆ. ಉಪಸ್ಥಿತರಿದ್ದರು.




.jpg)
