ನವದೆಹಲಿ: ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ಸುಳ್ಳು ಅಥವಾ ತಿರುಚಿದ ಸುದ್ದಿಗಳನ್ನು ಪ್ರಕಟಿಸದಂತೆ ಎಚ್ಚರವಹಿಸಲು ಕೇಂದ್ರ ಸರ್ಕಾರವು ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಶನಿವಾರ ಸಲಹೆ ನೀಡಿದೆ.
0
samarasasudhi
ಜನವರಿ 21, 2024
ನವದೆಹಲಿ: ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ಸುಳ್ಳು ಅಥವಾ ತಿರುಚಿದ ಸುದ್ದಿಗಳನ್ನು ಪ್ರಕಟಿಸದಂತೆ ಎಚ್ಚರವಹಿಸಲು ಕೇಂದ್ರ ಸರ್ಕಾರವು ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಶನಿವಾರ ಸಲಹೆ ನೀಡಿದೆ.
ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವೊಂದು ಸುಳ್ಳು ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಹರಡುವುದು ಗಮನಕ್ಕೆ ಬಂದಿದೆ. ಇದರಿಂದ ಕೋಮು ಸೌಹಾರ್ದತೆ, ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗಬಹುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೊರಡಿಸಿದ ಸಲಹೆಯಲ್ಲಿ ಹೇಳಿದೆ.
ದಿನಪತ್ರಿಕೆಗಳು, ಖಾಸಗಿ ಟಿ.ವಿ ಚಾನೆಲ್ಗಳು, ಡಿಜಿಟಲ್ ಮಾಧ್ಯಮಗಳಲ್ಲಿ ಸುದ್ದಿ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಪ್ರಕಟಿಸುವವರು ಹಾಗೂ ಸಾಮಾಜಿಕ ಮಾಧ್ಯಮಗಳ ವೇದಿಕೆಗಳು ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ತಿಳಿಸಿದೆ.