ಬದಿಯಡ್ಕ: ಇಲ್ಲಿಗೆ ಸಮೀಪದ ಪುಳಿತ್ತಡಿಯ ವೀಣಾವಾದಿನಿ ಸಂಗೀತ ವಿದ್ಯಾಪೀಠಂ ಸಂಸ್ಥೆಯಲ್ಲಿ ಇತ್ತೀಚೆಗೆ ನವಾವರಣ ಕೃತಿ ಸಹಿತ ಶ್ರೀವಿದ್ಯಾ ಸಪರ್ಯ ಯಜ್ಞವು ಬ್ರಹ್ಮಶ್ರೀ ಮುಲ್ಲಪ್ಪಳ್ಳಿ ಕೃಷ್ಣನ್ ನಂಬೂದಿರಿ ಅವರ ನೇತೃತ್ವದಲ್ಲಿ ನಾರಾಯಣೀಯಂ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿದ್ವಾನ್ ಬಳ್ಳಪದವು ಯೋಗೀಶ ಶರ್ಮ ಮತ್ತು ಅವರ ವಿದ್ಯಾರ್ಥಿಗಳಿಂದ ನವಾವರಣ ಕೃತಿಗಳ ಗಾಯನ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು, ಪೆÇೀಷಕರು, ಹಿತೈಷಿಗಳು ಭಾಗವಹಿಸಿದ್ದರು.




.jpg)
