HEALTH TIPS

ಮಣಿಪುರ: ಶೀಘ್ರವೇ ಕೇಂದ್ರದಿಂದ ಮಹತ್ವದ ನಿರ್ಧಾರ?

           ವದೆಹಲಿ (PTI): ಮಣಿಪುರದ ಜನರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವು 'ಕೆಲವು ಮುಖ್ಯ ನಿರ್ಧಾರ'ಗಳನ್ನು ಕೈಗೊಳ್ಳಲಿದೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಶನಿವಾರ ಹೇಳಿದ್ದಾರೆ.

           ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿ 'ಅತಿಮುಖ್ಯ ವಿಚಾರ'ಗಳನ್ನು ಚರ್ಚಿಸಿದ ಬಳಿಕ ಅವರು ಈ ಬಗ್ಗೆ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

                 'ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ಉನ್ನತ ಅವಕಾಶ ನನ್ನದಾಗಿತ್ತು. ನಮ್ಮ ರಾಜ್ಯಕ್ಕೆ ಸಂಬಂಧಿಸಿದ ಅತಿಮುಖ್ಯ ವಿಚಾರಗಳ ಬಗ್ಗೆ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದೆ' ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

             ಆದರೆ, ಚರ್ಚೆಯಾದ ವಿಷಯಗಳ ಬಗ್ಗೆ ಯಾವುದೇ ವಿವರವನ್ನು ಅವರು ಹಂಚಿಕೊಂಡಿಲ್ಲ.

ಮಣಿಪುರದಲ್ಲಿ ಮೇ 3, 2023ರಂದು ಆರಂಭವಾದ ಹಿಂಸಾಚಾರ ನಿರಂತರವಾಗಿ ಮುಂದುವರೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರವೇ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಪ್ರಕಟಿಸಲಿದೆ ಎನ್ನುವ ಸೂಚನೆಯನ್ನು ಅವರು ನೀಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries