HEALTH TIPS

ಕೇರಳ ಅತ್ಯುತ್ತಮ ಪಿಂಚಣಿ ರಾಜ್ಯ; ಪಿಂಚಣಿ ಮೊತ್ತದಲ್ಲಿ ಹೆಚ್ಚಳವಿಲ್ಲ; ಬಾಕಿ ಹಣ ಶೀಘ್ರ ಇತ್ಯರ್ಥ: ರಾಜ್ಯ ಹಣಕಾಸು ಸಚಿವರು

                 ತಿರುವನಂತಪುರ: ಪಿಂಚಣಿ ಮೊತ್ತವನ್ನು ಹೆಚ್ಚಿಸುವುದಿಲ್ಲ ಬದಲಾಗಿ ಪಿಂಚಣಿ ಬಾಕಿ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ಹೇಳಿದ್ದಾರೆ.

                ಅತ್ಯುತ್ತಮ ರೀತಿಯಲ್ಲಿ ಪಿಂಚಣಿ ನೀಡುವ ರಾಜ್ಯ ಕೇರಳ ಎಂದು ಸಚಿವರು ಹೇಳಿದರು. ಮುಂದಿನ ವರ್ಷ ಸಕಾಲದಲ್ಲಿ ಕಲ್ಯಾಣ ಪಿಂಚಣಿ ಮತ್ತು ಸಾಮಾಜಿಕ ಭದ್ರತಾ ಪಿಂಚಣಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹಣಕಾಸು ಸಚಿವರು ಬಜೆಟ್‍ನಲ್ಲಿ ತಿಳಿಸಿದ್ದಾರೆ.

              ಇದಲ್ಲದೇ ಸಹಭಾಗಿತ್ವ ಪಿಂಚಣಿ ಯೋಜನೆಯನ್ನು ಪರಿಶೀಲಿಸಲಾಗುವುದು. ಇದಕ್ಕಾಗಿ ವಿಶೇಷ ಸಮಿತಿಯನ್ನು ನೇಮಿಸಲಾಗುವುದು. ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ಸಹಭಾಗಿತ್ವ ಪಿಂಚಣಿ ಬದಲಿಗೆ ಹೊಸ ಯೋಜನೆ ಜಾರಿಗೆ ತರಲಾಗುವುದು ಎಂದು ಸಚಿವರು ತಿಳಿಸಿದರು.Áದರೂ,ಸಹಭಾಗಿತ್ವ ಪಿಂಚಣಿ ಯೋಜನೆಯನ್ನು ಪರಿಶೀಲಿಸಲಾಗುವುದು. ಇದಕ್ಕಾಗಿ ವಿಶೇಷ ಸಮಿತಿಯನ್ನು ನೇಮಿಸಲಾಗುವುದು.

            ಕಲ್ಯಾಣ ಪಿಂಚಣಿಯನ್ನು ಸಕಾಲದಲ್ಲಿ ವಿತರಿಸಲು ಕೇಂದ್ರವು ಸಂಕೋಲೆಯಾಗಿದೆ ಎಂದು ಹಣಕಾಸು ಸಚಿವರು ಬಜೆಟ್‍ನಲ್ಲಿ ತಮ್ಮ ನಿರಂತರ ಪಲ್ಲವಿಯನ್ನು ಪುನರುಚ್ಚರಿಸಿದರು. ಕೇರಳವು ದೇಶದಲ್ಲೇ ಅತ್ಯಂತ ಕೆಟ್ಟ ಹಣಕಾಸು ಇಲಾಖೆಯನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‍ಗೆ ವರದಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಕೇಂದ್ರದ ವಿರುದ್ಧ ಟೀಕೆಗಳು ಕೇಳಿ ಬರುತ್ತಿವೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries