HEALTH TIPS

ಯುಸಿಸಿ ಕರಡು ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಅಸ್ತು

              ಡೆಹ್ರಾಡೂನ್: ಏಕರೂಪ ನಾಗರಿಕ ಸಂಹಿತೆಯ(ಯುಸಿಸಿ) ಅಂತಿಮ ಕರಡು ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಈ ಮೂಲಕ ನಾಳೆಯಿಂದ ಆರಂಭವಾಗಲಿರುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಮಸೂದೆ ಮಂಡನೆ ನಿಶ್ಚಿತವಾಗಿದೆ.

              ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸುವ ಮುನ್ನ ಸಚಿವ ಸಂಪುಟದ ಅಂಗೀಕಾರ ಅಗತ್ಯವಿತ್ತು.

              ಈ ಹಿನ್ನೆಲೆಯಲ್ಲಿ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಅಧಿಕೃತ ನಿವಾಸದಲ್ಲೇ ಭಾನುವಾರ ಸಚಿವ ಸಂಪುಟ ಸಭೆ ನಡೆಯಿತು.

                   ಯುಸಿಸಿ ಕುರಿತಾದ ಮಸೂದೆಯನ್ನು ಮಂಡಿಸಿ ಜಾರಿಗೆ ತರುವ ನಿಟ್ಟಿನಲ್ಲಿ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದೆ. ಈ ಅಧಿವೇಶನದಲ್ಲಿ ಯುಸಿಸಿ ಜಾರಿಯಾದರೆ, ಸ್ವಾತಂತ್ರ್ಯಾನಂತರ ದೇಶದಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರಾಖಂಡವಾಗಲಿದೆ.

                  2022ರ ವಿಧಾನಸಭೆ ಚುನಾವಣೆಯ ಸಂದರ್ಭ ಧಾಮಿ ನೀಡಿದ್ದ ಭರವಸೆಗಳಲ್ಲಿ ಯುಸಿಸಿ ಜಾರಿಯು ಪ್ರಮುಖವಾಗಿತ್ತು.

             ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ 5 ಸದಸ್ಯರ ಆಯೋಗವು ಇತ್ತೀಚೆಗೆ ಯುಸಿಸಿಯ ಅಂತಿಮ ಕರಡು ಮಸೂದೆಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries