ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಸುಮಾರು 12 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಕನಿಷ್ಠ 23 ಪಾಕಿಸ್ತಾನದ ಪ್ರಜೆಗಳನ್ನು ಸೊಮಾಲಿಯಾ ಕಡಲ್ಗಳ್ಳರಿಂದ ರಕ್ಷಣೆ ಮಾಡಲಾಗಿದೆ ಎಂದು ಭಾರತೀಯ ನೌಕಾ ಪಡೆ ತಿಳಿಸಿದೆ.
ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಸುಮಾರು 12 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಕನಿಷ್ಠ 23 ಪಾಕಿಸ್ತಾನದ ಪ್ರಜೆಗಳನ್ನು ಸೊಮಾಲಿಯಾ ಕಡಲ್ಗಳ್ಳರಿಂದ ರಕ್ಷಣೆ ಮಾಡಲಾಗಿದೆ ಎಂದು ಭಾರತೀಯ ನೌಕಾ ಪಡೆ ತಿಳಿಸಿದೆ.
ಸೊಮಾಲಿಯಾ ಕಡಲ್ಗಳ್ಳರು ಎಫ್ವಿ ಅಲ್-ಕಂಬಾರ್ ನೌಕೆಯನ್ನು ಅಪಹರಿಸಿದ್ದರು.
'ಕಡಲ್ಗಳ್ಳರೊಂದಿಗೆ ಮಾತುಕತೆ ನಡೆಸಲು ನಿರ್ಧರಿಸಲಾಯಿತು. ಜತೆಗೆ, ಯಾವುದೇ ರಕ್ತಪಾತವಿಲ್ಲದೆ ಶರಣಾಗುವಂತೆ ಕಡಲ್ಗಳ್ಳರಿಗೆ ಸೂಚನೆ ನೀಡಲಾಯಿತು. ಇದಕ್ಕೆ ಒಪ್ಪಿದ ಕಡಲ್ಗಳ್ಳರು ಪಾಕ್ ಪ್ರಜೆಗಳನ್ನು ಬಿಡುಗಡೆ ಮಾಡಿದರು' ಎಂದು ಭಾರತೀಯ ನೌಕಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಸೋಮಾಲಿಯಾದ ಕರಾವಳಿ ಬಳಿ ಕೈಗೊಂಡ ಕಾರ್ಯಾಚರಣೆಯಲ್ಲಿ ವಶಕ್ಕೆ ತೆಗೆದುಕೊಳ್ಳಲಾದ 35 ಕಡಲುಗಳ್ಳರನ್ನು ಹೊತ್ತುತಂದ ಭಾರತೀಯ ಯುದ್ಧನೌಕೆ 'ಐಎನ್ಎಸ್ ಕೋಲ್ಕತ್ತ'ವು ಮುಂಬೈಗೆ ತಲುಪಿತ್ತು. ಕಡಲುಗಳ್ಳರನ್ನು ಮುಂಬೈ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ನೌಕಾ ಪಡೆ ತಿಳಿಸಿತ್ತು.