ಕಾಸರಗೋಡು: ಕರ್ನಾಟಕ ಸರ್ಕಾರದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾಗಿ ಆಯ್ಕೆಗೊಂಡ ಎ.ಆರ್. ಸುಬ್ಬಯ್ಯಕಟ್ಟೆ ಹಾಗೂ ಕರ್ನಾಟಕ ಯಕ್ಷಗಾನ ಅಕಾಡಮಿ ಸದಸ್ಯರಾಗಿ ಆಯ್ಕೆಗೊಂಡ ಸತೀಶ್ ಅಡಪ ಸಂಕಬೈಲು ಅವರಿಗೆ ಅಭಿನಂದನಾ ಸಮಾರಂಭ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನದಲ್ಲಿ ಜರುಗಿತು.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಜಂಟಿ ಆಶ್ರಯದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಿವೃತ್ತ ಪ್ರಾಧ್ಯಾಪಕ ಪ್ರೊ. ಎ.ಶ್ರೀನಾಥ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅಭಿನಂದನಾ ಭಾಷಣ ಮಾಡಿದರು. ಪೈವಳಿಕೆ ಗ್ರಾಪಂ ಸದಸ್ಯ ಜೆಡ್.ಎ ಕಯ್ಯಾರ್, ಶ್ರೀಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಸಂಚಾಲಕ ಕೆ.ವಿ ರಮೇಶ್, ಕನ್ನಡಭವನದ ಕೋಶಾಧಿಖಾರಿ ಸಂಧ್ಯಾರಾಣಿ ಟೀಚರ್, ಕನ್ನಡಪರ ಸಂಘಟನೆ ಪದಾಧಿಕಾರಿಗಳಾದ ವಿಶಾಲಾಕ್ಷ ಪುತ್ರಕಳ, ಪತ್ರಕರ್ತರಾದ ಪ್ರದೀಪ್ಬೇಕಲ್, ಅಚ್ಯುತ ಚೇವಾರ್, ವೀಜಿ ಕಾಸರಗೋಡು, ದೇವದಾಸ್ ಪಾರೆಕಟ್ಟ, ಗಂಗಾಧರ ತೆಕ್ಕೆಮೂಲೆ, ಅಖಿಲೇಶ್ ನಗುಮುಗಂ ಮೊದಲಾದವರು ಉಪಸ್ಥಿತರಿದ್ದರು.
ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ರೂವಾರಿ ಕೆ. ವಾಮನರಾವ್ ಬೇಕಲ್ ಸ್ವಾಗತಿಸಿದರು. ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಶ್ರೀಕಾಂತ್ ನೆಟ್ಟಣಿಗೆ ವಂದಿಸಿದರು. ವಿವಿಧ ಸಂಘಟನೆಗಳ ಪರವಾಗಿ ಎ.ಆರ್. ಸುಬ್ಬಯ್ಯಕಟ್ಟೆ ಹಾಗೂ ಸತೀಶ್ ಅಡಪ ಸಂಕಬೈಲು ಅವರನ್ನು ಗೌರವಿಸಲಾಯಿತು.




.jpg)
