ಕಾಸರಗೋಡು: ಛಾಯಾಗ್ರಾಹಕ, ಪತ್ರಕರ್ತ ಅಖಿಲೇಶ್ ನಗುಮುಗಂ ರವರು "ಕನ್ನಡ ಪಯಸ್ವಿನಿ ಪ್ರಶಸ್ತಿ - 2024" ಗೆ ಆಯ್ಕೆಯಾಗಿದ್ದಾರೆ. ಕನ್ನಡ ಭಾಷೆ, ಸಂಸ್ಕøತಿ, ಧಾರ್ಮಿಕ ಸೇವೆಯನ್ನು ಮಾನಿಸಿ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ ಕಾಸರಗೋಡು ಹಾಗೂ ಕಥಾ ಬಿಂದು ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ ಮಂಗಳೂರು ವತಿಯಿಂದ ಮಾರ್ಚ್ 10ರ ಭಾನುವಾರ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಬಯಲು ರಂಗ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
'ಕೇರಳ ಕರ್ನಾಟಕ ಕನ್ನಡ ಸಂಸ್ಕೃತಿ ಉತ್ಸವ - 2024 ಕಾರ್ಯಕ್ರಮದಲ್ಲಿ ಅಖಿಲೇಶ್ ನಗುಮುಗಂ ರವರ ಕನ್ನಡ ಸೇವೆ, ಗಡಿ ಭಾಗದ ಕನ್ನಡ ಹಾಗೂ ನಿರಂತರವಾಗಿ ಗಡಿ ಭಾಗದಲ್ಲಿ ಕನ್ನಡ ನಾಡು ನುಡಿಗಾಗಿ ಗಡಿ ಉತ್ಸವ ಮತ್ತು ಸಲ್ಲಿಸಿರುವ ಸಮಾಜ ಸೇವೆ, ಸಂಘಟನೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕನ್ನಡದ ಕಾರ್ಯಕ್ರಮಗಳು, ಕನ್ನಡ ಸೇವೆಯನ್ನು ಪರಿಗಣಿಸಿ ಕಾಸರಗೋಡು ಕನ್ನಡ ಭವನದ ರಾಜ್ಯಂತರ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ - 2024 “ ನೀಡಿ ಗೌರವಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಉಪ ಸಭಾಧ್ಯಕ್ಷ ಎಂ .ಕೆ ಪ್ರಾಣೇಶ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಧರ್ಮದರ್ಶಿ ಡಾ. ಹರೀಕೃಷ್ಣ ಪುನರೂರು ಮಾಜಿ ರಾಜ್ಯಾಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ ಸ್ಥಾಪಕರಾದ ಕಾರ್ಯಕ್ರಮದ ಆಯೋಜಕರಾದ ವಾಮನ್ ರಾವ್ ಬೇಕಲ್ ರವರು ತಿಳಿಸಿದ್ದಾರೆ.