ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಸಂಖ್ಯೆ-49 ಹಾಗೂ ಎಣ್ಮಕಜೆ ಗ್ರಾಪಂ ಕುಟುಂಬ ಆರೋಗ್ಯ ಕೇಂದ್ರದ ಜಂಟಿ ಆಶ್ರಯದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನೆ ದಿನ ಆಚರಿಸಲಾಯಿತು.
ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಪೆರ್ಲ ಕುಟುಂಬ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಪರಿವೀಕ್ಷಕ ಹರೀಶ್ ಎಂ.ಎಸ್. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಕ್ಷಯ ರೋಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತಿ ತೀವ್ರತೆಯ ಸಾಂಕ್ರಾಮಿಕ ರೋಗವಾಗಿದೆ. ಪ್ರತಿ ವರ್ಷ ಸುಮಾರು ಒಂದು ಕೊಟಿಗಿಂತಲು ಹೆಚ್ಚು ಮಂದಿ ರೋಗ ಬಾದಿತರಾಗುತ್ತಿದ್ದಾರೆ. 13 ಲಕ್ಷಕ್ಕೂ ಹೆಚ್ಚು ಮಂದಿ ಕ್ಷಯ ರೋಗ ಬಾಧಿಸಿ ಸಾವನ್ನಪ್ಪುತ್ತಿದ್ದಾರೆ. ಕ್ಷಯ ರೋಗ ನಿಯಂತ್ರಣಕ್ಕೆ ಎಲ್ಲ ಸ್ವಯಂಸೇವಕರು ಸಹಿತ ಎಲ್ಲರೂ ಕೈ ಜೋಡಿಸಬೇಕು ಎಂದರು.
ಸ್ವಯಂ ಸೇವಕರಿಗೆ ಪ್ರತಿಜ್ಞೆ ಬೋಧಿಸಲಾಯಿತು. ಜೂ.ಹೆಲ್ತ್ ಇನ್ಸ್ಪೆಕ್ಟರ್ ಬಿಜಿತ್ ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಕಾವ್ಯ ಚಂದ್ರನ್ ಸ್ವಾಗತಿಸಿ, ಸ್ವಯಂಸೇವಕ ಶಂಕರನಾರಾಯಣ ವಂದಿಸಿದರು. ಹರ್ಷಿತಾ ನಿರೂಪಿಸಿದರು.