HEALTH TIPS

ಕೇರಳ ಮಾಜಿ ಸಿಎಂ ಕರುಣಾಕರನ್‌ ಪುತ್ರಿ ಪ‍ದ್ಮಜಾ ಬಿಜೆಪಿಗೆ ಸೇರ್ಪಡೆ

             ವದೆಹಲಿ: ಕೇರಳದ ಮಾಜಿ ಮುಖ್ಯಮಂತ್ರಿ ಕೆ.ಕರುಣಾಕರನ್‌ ಅವರ ಪುತ್ರಿ, ಕಾಂಗ್ರೆಸ್‌ ನಾಯಕಿ ಪದ್ಮಜಾ ವೇಣುಗೋಪಾಲ್‌ ಅವರು ಗುರುವಾರ‌ ಬಿಜೆಪಿಗೆ ಸೇರಿದ್ದಾರೆ.

               ಕೇಂದ್ರದ ಮಾಜಿ ಸಚಿವ ಪ್ರಕಾಶ್‌ ಜಾವಡೇಕರ್‌ ಸೇರಿದಂತೆ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಪದ್ಮಜಾ ಅವರು ಕಮಲ ಪಾಳಯಕ್ಕೆ ಸೇರ್ಪ‍ಡೆಯಾದರು.

            ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪದ್ಮಜಾ ಅವರು, 'ಬಿಜೆಪಿ ಸೇರಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ, ಅದರೊಂದಿಗೆ ಸ್ವಲ್ಪ ಆತಂಕವು ಇದೆ. ಹಲವು ವರ್ಷಗಳಿಂದ ಕಾಂಗ್ರೆಸ್‌ನಲ್ಲಿದ್ದ ನಾನು ಸಂತೋಷವಾಗಿರಲಿಲ್ಲ, ಅದರಲ್ಲೂ ಕಳೆದ ವಿಧಾನಸಭೆ ಚುನಾವಣೆಯ ಬಳಿಕ ತೀವ್ರ ಅಸಮಾಧಾನ ಉಂಟಾಗಿತ್ತು. ಈ ಕಾರಣಕ್ಕೆ ಪಕ್ಷವನ್ನು ತ್ಯಜಿಸಲು ನಿರ್ಧರಿಸಿದೆ' ಎಂದರು.

                'ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸುವ ಉದ್ದೇಶದಿಂದ ಹಲವು ಬಾರಿ ಕಾಂಗ್ರೆಸ್‌ನ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದ್ದೆ, ಆದರೆ ಅವರು ಅವಕಾಶ ನೀಡಲಿಲ್ಲ. ಎಲ್ಲ ಪಕ್ಷಗಳಲ್ಲಿ ಸಮರ್ಥ ನಾಯಕತ್ವ ಇದೆ. ಆದರೆ, ಕಾಂಗ್ರೆಸ್‌ನಲ್ಲಿ ನಾಯಕತ್ವ ಇಲ್ಲ. ಸೋನಿಯಾ ಗಾಂಧಿಯವರ ಬಗ್ಗೆ ಗೌರವವಿದೆ. ಅವರು ಭೇಟಿಯಾಗುವ ಅವಕಾಶವನ್ನೆ ನೀಡಲಿಲ್ಲ' ಎಂದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries