ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮೀಯಪದವು ಮದಕ್ಕಳ ನಿವಾಸಿ ಮೊಯ್ದೀನ್ ಆರಿಫ್(22)ನಿಗೂಢ ಸಾವಿಗೆ ಸಂಬಂಧಿಸಿ ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಜತ್ತೂರು ಕಣ್ವತೀರ್ಥ ರೈಲ್ವೆ ಗೇಟ್ ಸನಿಹದ ನಿವಾಸಿಗಳಾದ ಶೌಕತಲಿ ಹಾಗೂ ಅಬೂಬಕ್ಕರ್ ಸಿದ್ದೀಕ್ ಬಂಧಿತರು. ಪ್ರಕರಣಕ್ಕೆ ಸಂಬಂಧಿಸಿ ಕಣ್ವತೀರ್ಥ ನಿವಾಸಿ ಅಬ್ದುಲ್ ರಶೀದ್ ಎಂಬಾತನನ್ನು ಈ ಹಿಂದೆ ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ ಮೂರಕ್ಕೇರಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಕರಣದಲ್ಲಿ ಇನ್ನೂ ಆರು ಮಂದಿ ಆರೋಪಿಗಳಿದ್ದು, ಇವರು ತಮಿಳ್ನಾಡು, ಬೆಂಗಳೂರಿಗೆ ಪರಾರಿಯಾಗಿರುವ ಸಂಶಯ ವ್ಯಕ್ತಪಡಿಸಲಾಗಿದ್ದು, ಪೊಲಿಸರು ತನಿಖೆಯನ್ನು ಕರ್ನಾಟಕ ಹಾಗೂ ತಮಿಳ್ನಾಡಿಗೆ ವಿಸ್ತರಿಸಿದ್ದಾರೆ.