ಜೆರುಸಲೇಮ್: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಬಾಲ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿಯಾಗಿದ್ದು, ಗಾಜಾದ ಬೆಳವಣಿಗೆಗಳು ಮತ್ತು ತುರ್ತು ಮಾನವೀಯ ನೆರವು ಒದಗಿಸುವ ಕುರಿತಂತೆ ಚರ್ಚೆ ನಡೆಸಿದ್ದಾರೆ.
ಜೆರುಸಲೇಮ್: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಬಾಲ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿಯಾಗಿದ್ದು, ಗಾಜಾದ ಬೆಳವಣಿಗೆಗಳು ಮತ್ತು ತುರ್ತು ಮಾನವೀಯ ನೆರವು ಒದಗಿಸುವ ಕುರಿತಂತೆ ಚರ್ಚೆ ನಡೆಸಿದ್ದಾರೆ.
'ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಬಾಲ್ ಅವರು, ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
'ಒತ್ತೆಯಾಳುಗಳ ಬಿಡುಗಡೆ ಮತ್ತು ಮಾನವೀಯ ನೆರವು ಕುರಿತಂತೆಯೂ ಚರ್ಚೆ ನಡೆದಿದೆ' ಎಂದು ಪೋಸ್ಟ್ನಲ್ಲಿ ತಿಳಿಸಲಾಗಿದೆ.
ಇಸ್ರೇಲ್ ಎನ್ಎಸ್ಎ ಝಾಕಿ ಹನೆಬಿ ಅವರನ್ನೂ ಡೋಬಾಲ್ ಭೇಟಿಯಾದರು.
ಪ್ರಧಾನಿ ನರೇಂದ್ರ ಮೋದಿ ಅವರು ಸಹ ಈ ಭಾಗದ ಯುಎಇ, ಕತಾರ್, ಸೌದಿ ಅರೇಬಿಯಾ, ಈಜಿಪ್ಟ್ ಮತ್ತು ಜೋರ್ಡಾನ್ನಂತಹ ಪ್ರಮುಖ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಅಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಉತ್ತೇಜಿಸುವ ಚರ್ಚೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಅಗತ್ಯ ವಸ್ತುಗಳನ್ನು ಗಾಜಾಗೆ ಕಳುಹಿಸುವ ಮೂಲಕ ಭಾರತವು ಅಲ್ಲಿನ ಜನರಿಗೆ ಪ್ರಮುಖವಾಗಿ ಬೇಕಾಗಿದ್ದ ಮಾನವೀಯ ನೆರವನ್ನು ನೀಡಿದೆ.