ಮಂಜೇಶ್ವರ : ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರವೇಶ ಮಾರ್ಗದ ನವೀಕರಣ ಕಾಮಗಾರಿಯ ಉದ್ಘಾಟನೆಯು ನಡೆಯಿತು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ಮಂಜೂರಾಗಿ ನವೀಕರಣವಾದ ಪ್ರವೇಶ ಮಾರ್ಗವನ್ನು ವಾರ್ಡ್ ಸದಸ್ಯ ಜನಾರ್ಧನ ಪೂಜಾರಿ ಕುಳೂರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ್ ಎಲಿಯಾಣ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಶತಮಾನೋತ್ಸವ ಅತಿಥಿ ಸತ್ಕಾರ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೊಯ್ಯೆಲು, ಸನ್ಮಾನ ಸಮಿತಿ ಅಧ್ಯಕ್ಷ ನಾರಾಯಣ ನಾೈಕ್ ನಡುಹಿತ್ಲು, ಕಾರ್ಯಕ್ರಮ ಸಮಿತಿಯ ಅಧ್ಯಕ್ಷ ಹರಿರಾಮ ಕುಳೂರು, ಆರೋಗ್ಯ ಸಮಿತಿ ಅಧ್ಯಕ್ಷ ಕೃಷ್ಣವೇಣಿ ಕುಳೂರು ಪಾದೆ, ಆಹಾರ ಸಮಿತಿ ಅಧ್ಯಕ್ಷ ರಘುರಾಮ ಶೆಟ್ಟಿ ಎಲಿಯಾಣ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು.