HEALTH TIPS

ಅಬಕಾರಿ ನೀತಿ ಪ್ರಕರಣ: ಇಡಿ ಕಚೇರಿಯಲ್ಲಿ ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ತನಿಖೆ!

           ವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಬಂಧನವಾದ ಒಂದು ವಾರದ ನಂತರ ಸಚಿವ ಕೈಲಾಶ್ ಗಹ್ಲೋಟ್ ಶನಿವಾರ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.

              ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ ಶನಿವಾರ ಬೆಳಗ್ಗೆ ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಸಮನ್ಸ್ ನೀಡಿತು. ಸಮನ್ಸ್ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ ಅವರು ಇಡೀ ಕಚೇರಿಗೆ ತಲುಪಿದರು.

               ನಜಾಫ್‌ಗಢದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಗಹ್ಲೋಟ್ (49) ದೆಹಲಿ ಸರ್ಕಾರದಲ್ಲಿ ಸಾರಿಗೆ, ಗೃಹ ಮತ್ತು ಕಾನೂನು ಸಚಿವರಾಗಿದ್ದಾರೆ .

             ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತು, ಸ್ವತಂತ್ರ ಭಾರತದಲ್ಲಿ ಬಂಧನಕ್ಕೊಳಗಾದ ಮೊದಲ ಹಾಲಿ ಸಿಎಂ ಎಂಬ ಕುಖ್ಯಾತಿಗೆ ಅವರು ಪಾತ್ರರಾದರು. ಸಿಎಂ ಏಪ್ರಿಲ್ 1ರವರೆಗೆ ಇಡಿ ಕಸ್ಟಡಿಯಲ್ಲಿದ್ದಾರೆ.

                ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಕೂಡ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅಬಕಾರಿ ನೀತಿಗೆ ಸಂಬಂಧಿಸಿದಂತೆ ಎರಡು ಪ್ರಕರಣ ಹೂಡಲಾಗಿದ್ದು, ಒಂದು ಸಿಬಿಐನಿಂದ, ಮತ್ತೊಂದು ಮನಿ ಲಾಂಡರಿಂಗ್ ಮೇಲೆ ಇಡಿ ತನಿಖೆ ನಡೆಸುತ್ತಿವೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries