ಪೆರ್ಲ: ಎಣ್ಮಕಜೆ ಗ್ರಾಮ ಪಂಚಾಯತಿಯ ಪೆರ್ಲ ಕುಟುಂಬ ಆರೋಗ್ಯ ಕೇಂದ್ರದ ವತಿಯಿಂದ ಕ್ಷಯ ರೋಗ ನಿರ್ಮೂನೆಯ ಯಜ್ಞದಂತೆ ಪೆರ್ಲದಲ್ಲಿ ಟ್ಯಾಕ್ಷಿ ಚಾಲಕರ ಮೂಲಕ ಕರಪತ್ರ ವಿತರಿಸಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಜತೆಗೆ ವಿಶ್ವ ಕ್ಷಯ ರೋಗ ದಿನಾಚರಣೆಯನ್ನು ನಡೆಸಲಾಯಿತು.
ವೈದ್ಯಾಧಿಕಾರಿ ಡಾ. ಗ್ರೀಷ್ಮಾ ಕಾರ್ಯಕ್ರಮ ಉದ್ಘಾಟಿಸಿದರು. ಕಿರಿಯ ಆರೋಗ್ಯ ಪರಿವೀಕ್ಷಕ ಸುಜಿತ್ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕುಷ್ಠರೋಗ ನಿರ್ಮೂಲನಾ ಪ್ರತಿಜ್ಞೆ ಬೋಧಿಸಲಾಯಿತು. ಬಳಿಕ ಪೇಟೆಯ ಆಟೋ,ಟ್ಯಾಕ್ಸಿ ಚಾಲಕರಿಗೆ ಕರಪತ್ರ ಹಂಚಲಾಯಿತು. ಕಿರಿಯ ಆರೋಗ್ಯ ಪರಿವೀಕ್ಷಕರು, ದಾದಿಯರು, ಆರೋಗ್ಯ ಕಾರ್ಯಕರ್ತರು ಕಾರ್ಯಕ್ರಮಕ್ಕೆ ನೇತೃತ್ವವಹಿಸಿದ್ದರು.