ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ `ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸದಸ್ಯ ಬದಿಯಡ್ಕ `ಕಶ್ಯಪ' ಮನೆಯ ಶ್ಯಾಮ್ ಭಟ್ ರವರ ಹೃದಯ ಚಿಕಿತ್ಸೆಗೆ ಸಹಾಯಧನದ ಮೊತ್ತ ರೂ.50,000 ರೂ. ಚೆಕ್ ನ್ನು ಕ್ಯಾಂಪ್ಕೋ ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ ವಿತರಿಸಿದರು. ಈ ಸಂದಭರ್Àದಲ್ಲಿ ನಿರ್ದೇಶಕ ಪದ್ಮರಾಜ್ ಪಟ್ಟಾಜೆ, ಕ್ಯಾಂಪ್ಕೋ ಬದಿಯಡ್ಕ ಪ್ರಾಂತೀಯ ಪ್ರಬಂಧಕ ಗಿರೀಶ್ ಇ, ಬದಿಯಡ್ಕ ಶಾಖೆಯ ಪ್ರಬಂಧಕ ದಿನೇಶ್ ಕುಮಾರ್ ಕೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.