ಚಂಡೀಗಢ: ಹರಿಯಾಣದ ಖನೌರಿ ಗಡಿಯಲ್ಲಿ ಪ್ರತಿಭಟನೆನಿರತ ರೈತರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಘರ್ಷಣೆಯಲ್ಲಿ ರೈತ ಶುಭಕರಣ್ ಸಿಂಗ್ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.
ಚಂಡೀಗಢ: ಹರಿಯಾಣದ ಖನೌರಿ ಗಡಿಯಲ್ಲಿ ಪ್ರತಿಭಟನೆನಿರತ ರೈತರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಘರ್ಷಣೆಯಲ್ಲಿ ರೈತ ಶುಭಕರಣ್ ಸಿಂಗ್ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.
ರೈತರ ಪ್ರತಿಭಟನೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಜಿ.ಎಸ್.ಸಂಧವಾಲಿಯಾ ಮತ್ತು ನ್ಯಾಯಮೂರ್ತಿ ಲಪಿತಾ ಬ್ಯಾನರ್ಜಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಗುರುವಾರ ಈ ಆದೇಶ ನೀಡಿದೆ.
ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಹಾಗೂ ಪಂಜಾಬ್ ಮತ್ತು ಹರಿಯಾಣದ ಇಬ್ಬರು ಎಡಿಜಿಪಿ ಶ್ರೇಣಿಯ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದು ಅರ್ಜಿದಾರ ವಕೀಲ ಉದಯ್ ಪ್ರತಾಪ್ ಸಿಂಗ್ ತಿಳಿಸಿದರು.
ಫೆಬ್ರುವರಿ 21ರಂದು ಖನೌರಿ ಗಡಿಯಲ್ಲಿ ರೈತರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಘರ್ಷಣೆಯಲ್ಲಿ ಬಟಿಂಡಾ ನಿವಾಸಿ ಶುಭಕರಣ್ ಸಿಂಗ್ ಮೃತಪಟ್ಟಿದ್ದು, 12 ಮಂದಿ ಪೊಲೀಸರು ಗಾಯಗೊಂಡಿದ್ದರು.