HEALTH TIPS

ಭಾಷಣಕ್ಕಾಗಿ ಲಂಚ | ಜನಪ್ರತಿನಿಧಿಗಳಿಗೆ ಶಿಕ್ಷೆ ವಿನಾಯಿತಿ ಇಲ್ಲ: ಸುಪ್ರೀಂ ಕೋರ್ಟ್

            ವದೆಹಲಿ: ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಜನಪ್ರತಿನಿಧಿಗಳಿಗೆ ಕಾನೂನು ಕ್ರಮದಿಂದ ಯಾವುದೇ ವಿನಾಯಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

              ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ಏಳು ಮಂದಿ ಇದ್ದ ಸಾಂವಿಧಾನಿಕ ಪೀಠವು, 1998ರಲ್ಲಿ ಜೆಎಂಎಂ ಲಂಚ ಪ್ರಕರಣದಲ್ಲಿ ಪಂಚ ಸದಸ್ಯ ಪೀಠ ನೀಡಿದ್ದ ತೀರ್ಪನ್ನು ಸರ್ವಾನುಮತದಿಂದ ರದ್ದು ಮಾಡಿತು.

               ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಶಾಸಕರಿಗೆ ಆ ತೀರ್ಪಿನಲ್ಲಿ ಕಾನೂನು ಕ್ರಮದಿಂದ ವಿನಾಯಿತಿ ನೀಡಲಾಗಿತ್ತು.

             ಲಂಚಕ್ಕೆ ಸಂಸದೀಯ ಸವಲತ್ತುಗಳಿಂದ ರಕ್ಷಣೆ ನೀಡಲಾಗುವುದಿಲ್ಲ. 1998ರ ತೀರ್ಪಿನ ವ್ಯಾಖ್ಯಾನವು ಸಂವಿಧಾನದ 105 ಮತ್ತು 194 ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ತೀರ್ಪು ಪ್ರಕಟಿಸುವ ವೇಳೆ ಸಿಜೆಐ ನುಡಿದರು.

                 ಲಂಚವು ಸಾರ್ವಜನಿಕ ಜೀವನದಲ್ಲಿ ನಿಷ್ಠೆಯನ್ನು ನಾಶಪಡಿಸುವುದರಿಂದ, ಈ ವಿಧಿಗಳಡಿ ವಿನಾಯಿತಿ ಹೊಂದಿಲ್ಲ ಎಂದು ಸಿಜೆಐ ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries