ಮಂಜೇಶ್ವರ: ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಮತ್ತು ಗಿಳಿವಿಂಡು ಕನ್ನಡ ಸಾಹಿತ್ಯಿಕ, ಸಾಂಸ್ಕøತಿಕ ವೇದಿಕೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ 141ನೇ ಜನ್ಮದಿನಾಚರಣೆ ಇಂದು(ಮಾ.23) ಮಧ್ಯಾಹ್ನ 2 ಗಂಟೆಗೆ ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ಜರುಗಲಿದೆ.
ಕಾಲೇಜಿನ ಪ್ರಭಾರ ಪ್ರಾಂಶುಪಾಲ ಮಹಮ್ಮದಾಲಿ .ಕೆ ಸಮಾರಂಭ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸುವರು.
ಗೋವಿಂದ ಪೈ ಸ್ಮಾರಕ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಶಿವಶಂಕರ.ಪಿ, ಡಾ.ಸಚೀಂದ್ರನ್, ಡಾ. ಸಿಂಧು ಜೋಸೆಫ್, ಡಾ.ರಮಾ, ಆಗ್ನೇಯ ಸಾಯಿ, ದಿನೇಶ ಕೆ.ಎನ್ ಭಾಗವಹಿಸುವರು. ಈ ಸಂದರ್ಭ ಗೋವಿಂದ ಪೈ ಅವರ ಬದುಕು -ಬರಹಗಳ ಕುರಿತು ವಿಚಾರಗೋಷ್ಠಿ ನಡೆಯುವುದು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸಮನ್ವಯಕಾರರಾಗಿರುವರು.
ವಿದ್ಯಾಶ್ರೀ,ವಸುಮಿತ್ರಾ.ಕೆ.ಆರ್,ವದೀಕ್ಷಿತ.ಕೆ,ವಸರ್ವಾಣಿ ಬಿ.ಕೆ,ವಆದಿಶ್ರೀ ಎಸ್.ಎನ್, ವಿವೇಕ್.ಎ ಇವರು ಗೋವಿಂದ ಪೈ ಅವರ ಬದುಕು,ಕವನಗಳು, ನಾಟಕ, ತಾಯಿ ಮತ್ತು ನೋ ನಾಟಕಗಳು,ಸಂಶೋಧನೆಗಳು ಮತ್ತುಖಂಡಕಾವ್ಯಗಳ ಕುರಿತು ಪ್ರಬಂಧ ಮಂಡಿಸುವರು.
ಕ.ಸಾ.ಪ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು, ಉಪನ್ಯಾಸಕರಾದ ಡಾ.ಸುಜೇಶ್.ಎಸ್, ಜಯಂತಿ.ಕೆ ಉಪಸ್ಥಿತರಿರುವರು.
…………………………………………………………………………………………………………
: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿ ನೇತೃತ್ವದಲ್ಲಿ ಇಂದು(ಮಾ.23) ಅಪರಾಹ್ನ 3.30 ರಿಂದ ಮಂಜೇಶ್ವರ ಗಿಳಿವಿಂಡು ಆವರಣದಲ್ಲಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಜನ್ಮದಿನಾಚರಣೆ ಸಮಾರಂಭ ಕವಿ ನಮನ ನಡೆಯಲಿದೆ.
ಸಮಾರಂಭದಲ್ಲಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿ ಪ್ರಧಾನ ಕಾರ್ಯದರ್ಶಿ ಉಮೇಶ ಎಂ. ಸಾಲಿಯಾನ್ ಅಧ್ಯಕ್ಷತೆ ವಹಿಸುವರು. ಹಿರಿಯ ಸಾಹಿತಿ ಡಾ.ರಮಾನಂದ ಬನಾರಿ ಉದ್ಘಾಟಿಸುವರು. ಗೋವಿಂದ ಪೈಗಳ ಬದುಕು ಬರಹ ವಿಷಯದ ಬಗ್ಗೆ ಹಿರಿಯ ಸಾಹಿತಿ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಉಪನ್ಯಾಸ ನೀಡುವರು. ಕೇರಳ ತುಳು ಅಕಾಡೆಮಿ ಅಧ್ಯಕ್ಷ ಜಯಾನಂದ ಕೆ.ಆರ್, ಪಾರ್ತಿಸುಬ್ಬ ಯಕ್ಷಗಾನ ಕಲಾಕ್ಷೇತ್ರದ ಅಧ್ಯಕ್ಷ ವಿಶ್ವನಾಥ ಕುದುರು, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕಾಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸಂಕಬೈಲು ಸತೀಶ್ ಅಡಪ, ಕರ್ನಾಟಕ ಗಡಿ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ, ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಕಾರ್ಯದರ್ಶಿ ಕಮಲಾಕ್ಷ ಡಿ.ಜೈತುಳುನಾಡ್ ಕಾಸರಗೋಡು ಘಟಕದ ಅಧ್ಯಕ್ಷೆ ಕುಶಾಲಾಕ್ಷಿ ವಿ. ಕಣ್ವತೀರ್ಥ ಅತಿಥಿಗಳಾಗಿರುವರು. ಮಹಾಕವಿ ಗೋವಿಂದ ಪೈ ಸ್ಮಾರಕ ಸಮಿತಿ ಜೊತೆ ಕಾರ್ಯದರ್ಶಿ ಜಯಂತ ಮಾಸ್ತರ್ ಗ್ರಂಥಾಲಯಕ್ಕೆ ಪುಸ್ತಕ ಸ್ವೀಕಾರ ನಡೆಸುವರು. ಸ್ಮಾರಕ ಸಮಿತಿ ಕೋಶಾಧಿಕಾರಿ ಬಾಲಕೃಷ್ಣ ಶೆಟ್ಟಿಗಾರ್, ಸದಸ್ಯ ಕಮಲಾಕ್ಷ ಕೆ, ವನಿತಾ ಆರ್ ಶೆಟ್ಟಿ ಮೊದಲಾದವರು ಉಪಸ್ಥಿತರಿರುವರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕøತಿಕ ಕಾರ್ಯಕ್ರಮ, ಬಹುಭಾಷಾ ಕವಿತಾ ವಾಚನ ನಡೆಯಲಿದೆ.