ಪೆರ್ಲ : ಎಣ್ಮಕಜೆ ಗ್ರಾಮ ಪಂಚಾಯತಿ ಪೆರ್ಲತ್ತಡ್ಕದಲ್ಲಿ ಸಂಸದರ ಸ್ಥಳೀಯ ಅಭಿವೃದ್ಧಿ ನಿಧಿ ಉಪಯೋಗಿಸಿ ನಿರ್ಮಿಸಿದ ಕಮ್ಯೂನಿಟಿ ಹಾಲ್ ಉದ್ಘಾಟನೆಯನ್ನು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಶುಕ್ರವಾರ ನೆರವೇರಿಸಿದರು. ಎಣ್ಮಕಜೆ ಗ್ರಾಮ ಪಂಚಾಯತಿ ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಅಧ್ಯಕ್ಷತೆ ವಹಿಸಿದ್ದರು.
ಎಣ್ಮಕಜೆ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ರಮ್ಲ ಇಬ್ರಾಹಿಂ, ಮಂಜೇಶ್ವರ ಬ್ಲಾಕ್ ಪಂಚಾಯತಿ ಸದಸ್ಯ ಬಟ್ಟು ಶೆಟ್ಟಿ, ಮಂಜೇಶ್ವರ ಎಸ್ ಸಿ ಡಿ ಒ ತಿರುಮಲೇಶ್ವರ ಶುಭಾಶಂಸನೆಗೈದರು. ಕಾಟುಕುಕ್ಕೆ ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ ನಾರಾಯಣ ಮಣಿಯಾಣಿ, ತಾರನಾಥ ರೈ ಪಡ್ಡಂಬೈಲು ಮೊದಲಾದವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಕಟ್ಟಡ ನಿರ್ಮಾಣಕ್ಕೆ ಸ್ಥಳದಾನಗೈದ ಬೇಬಿ ಅವರನ್ನು ಸನ್ಮಾನಿಸಲಾಯಿತು.
ಎಣ್ಮಕಜೆ ಗ್ರಾ.ಪಂ.ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ವಾರ್ಡ್ ಸದಸ್ಯ ಬಿ.ಎಸ್.ಗಾಂಭೀರ್ ಸ್ವಾಗತಿಸಿ, ಗ್ರಾಮ ಪಂಚಾಯತಿ ಸದಸ್ಯ ಶಶಿಧರ ವಂದಿಸಿದರು. ನವಾಸ್ ಮತ್ರ್ಯ ನಿರೂಪಿಸಿದರು.