HEALTH TIPS

ಸಿಂಗಪುರದಲ್ಲಿ ಭಾರತೀಯ ಸಮುದಾಯದೊಂದಿಗೆ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಸಂವಾದ

            ಸಿಂಗಪುರ: 'ರಷ್ಯಾ ಜೊತೆ ಭಾರತ ಯಾವಾಗಲೂ ಉತ್ತಮ ಬಾಂಧವ್ಯ ಹೊಂದಿದೆ. ಎರಡೂ ದೇಶಗಳು ಪರಸ್ಪರರ ಹಿತಾಸಕ್ತಿಗಳ ಕುರಿತು ಹೆಚ್ಚು ಮುತುವರ್ಜಿ ವಹಿಸಿವೆ' ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಭಾನುವಾರ ಹೇಳಿದ್ದಾರೆ.

              ಸಿಂಗಪುರ ಪ್ರವಾಸದಲ್ಲಿರುವ ಅವರು, ಇಲ್ಲಿನ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು.

              'ಭಾರತವು ರಷ್ಯಾ ಅಥವಾ ಇತರ ಯಾವುದೇ ದೇಶದೊಂದಿಗೆ ತನ್ನದೇ ದೃಷ್ಟಿಕೋನದಿಂದ ವ್ಯವಹರಿಸುತ್ತದೆ' ಎಂದ ಅವರು, 'ರಷ್ಯಾ ಇತ್ತೀಚೆಗೆ ಚೀನಾಕ್ಕೆ ಹತ್ತಿರವಾಗುತ್ತಿದೆ' ಎಂಬ ಮಾತುಗಳನ್ನು ಅಲ್ಲಗಳೆದರು.

               'ರಷ್ಯಾ ನಮಗೆ ಸಹಾಯ ಮಾಡಿದೆಯೇ ಅಥವಾ ಹಾನಿ ಮಾಡಿದೆಯೇ ತಿಳಿಸಿ. ನಿರ್ಣಾಯಕ ಸಂದರ್ಭಗಳಲ್ಲಿ ರಷ್ಯಾ ನಮಗೆ ನೆರವಿನ ಹಸ್ತ ಚಾಚಿದೆಯೇ ಅಥವಾ ಅಡಚಣೆ ಉಂಟು ಮಾಡಿದೆಯೇ? ರಷ್ಯಾದೊಂದಿಗೆ ಸಂಬಂಧ ಮುಂದುವರಿಸುವುದರಿಂದ ನಮಗೆ ಪ್ರಯೋಜನವಾಗಲಿದೆಯೇ ಅಥವಾ ಕೇವಲ ತೊಂದರೆ ಅನುಭವಿಸಬೇಕಾಗುತ್ತದೆಯೇ ಹೇಳಿ' ಎಂದು ಸಭಿಕರಿಂದ ತೂರಿ ಬಂದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

              ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಕುರಿತ ಮತ್ತೊಂದು ಪ್ರಶ್ನೆಗೆ, 'ಈ ವಿಚಾರವಾಗಿ ನಾನು ಕಾದು ನೋಡುತ್ತೇನೆ. ಆದರೆ, ಅಮೆರಿಕ ಅಧ್ಯಕ್ಷರಾಗಿ ಯಾರೇ ಚುನಾಯಿತರಾದರೂ ಅವರೊಂದಿಗೆ ಭಾರತ ಉತ್ತಮ ಬಾಂಧವ್ಯ ಹೊಂದಿರಲಿದೆ' ಎಂದು ಪ್ರತಿಕ್ರಿಯಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries