HEALTH TIPS

ಕೃಷಿಕರ ಪ್ರತಿಭಟನೆ : ಪ್ರಚಾರಕ್ಕಾಗಿಯೇ ಅರ್ಜಿ ಸಲ್ಲಿಸಬೇಡಿ: ಸುಪ್ರೀಂ ಕೋರ್ಟ್‌

          ವದೆಹಲಿ: 'ರೈತರ ಪ್ರತಿಭಟನೆಗೆ ಸಂಬಂಧಿಸಿದ ವಿಷಯಗಳು ತೀರಾ ಗಂಭೀರವಾದವು. ಇದಕ್ಕೆ ಸಂಬಂಧಿಸಿದಂತೆ ಕೇವಲ ಪ್ರಚಾರಕ್ಕಾಗಿ ಸಾರ್ವಜನಿತ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಬಾರದು' ಎಂದು ಸುಪ್ರೀಂ ಕೋರ್ಟ್‌ ಕಿವಿಮಾತು ಹೇಳಿದೆ.

           ಸಿಖ್‌ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಗ್ನೋಸ್ಟೋಸ್ ಥಿಯೋಸ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠವು ಈ ಮಾತು ಹೇಳಿತು.

            ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ರೈತರ ಹಕ್ಕನ್ನು ಕೇಂದ್ರ ಮತ್ತು ಕೆಲ ರಾಜ್ಯ ಸರ್ಕಾರಗಳು ಹತ್ತಿಕ್ಕುತ್ತಿವೆ ಎಂದು ಅರ್ಜಿದಾರರು ಆರೋಪಿಸಿದ್ದರು. ಅರ್ಜಿಯನ್ನು ಗಮನಿಸುತ್ತಿದ್ದಂತೆ ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ಅದನ್ನು ವಾಪಸು ಪಡೆಯುವಂತೆಯೂ ಸೂಚಿಸಿತು.

            'ಕೇವಲ ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಬಾರದು. ನಿಜವಾಗಿ ಗಂಭೀರತೆ ಮತ್ತು ಬದ್ಧತೆ ಉಳ್ಳವರು ಮಾತ್ರ ಅರ್ಜಿ ಸಲ್ಲಿಸಬೇಕು. ದಿನಪತ್ರಿಕೆಗಳನ್ನು ನೀವು ಗಮನಿಸಿದ್ದೇ ಆಗಿದ್ದರೆ ಹೈಕೋರ್ಟ್‌ ಈ ಪ್ರಕರಣದ ವಿಚಾರಣೆ ನಡೆಸುತ್ತಿರುವುದೂ ನಿಮಗೆ ತಿಳಿದಿರುತ್ತದೆ' ಎಂದು ಪೀಠ ಹೇಳಿತು.

           'ಹೈಕೋರ್ಟ್‌ ಈ ಬಗ್ಗೆ ಈಗಾಗಲೇ ಕೆಲವು ನಿರ್ದೇಶನಗಳನ್ನು ನೀಡಿದೆ ಎಂಬುದು ನಿಮಗೆ ಗೊತ್ತಿರಬೇಕು. ಮುಂದಿನ ಬಾರಿ ಎಚ್ಚರಿಕೆಯಿಂದಿರಿ. ಇವು ಸಂಕೀರ್ಣವಾದ ವಿಷಯಗಳು. ಹೆಚ್ಚಿನ ಅಧ್ಯಯನವನ್ನು ಮಾಡಿ' ಎಂದು ಅರ್ಜಿದಾರರ ಪರ ವಕೀಲರಿಗೆ ತಾಕೀತು ಮಾಡಿತು.

             'ನವದೆಹಲಿಗೆ ಸಂಪರ್ಕ ಕಲ್ಪಿಸುವ ಗಡಿಯನ್ನು ಮುಚ್ಚಿರುವ ಕೇಂದ್ರ, ಕೆಲ ರಾಜ್ಯ ಸರ್ಕಾರಗಳು ರೈತರಿಗೆ ಬೆದರಿಕೆ ಒಡ್ಡಿವೆ. ನಿಷೇಧಾಜ್ಧೆ ಹೇರಿವೆ. ಕೆಲವರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ನಿರ್ಬಂಧಿಸಲಾಗಿದೆ' ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries