ಕಾಸರಗೋಡು: ಬಿಡಿಜೆಎಸ್ ಜಿಲ್ಲಾ ಸಮಿತಿಯ ವತಿಯಿಂದ ನಡೆದ ಚುನಾವಣಾ ಪ್ರಚಾರವನ್ನು ಪಕ್ಷದ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಮನೀಶ್ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಗಣೇಶ ಪಾರೆಕಟ್ಟ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಸಮಿತಿ ಕಾರ್ಯದರ್ಶಿ ಕೆ. ರಂಜಿತ್, ಜಿಲ್ಲಾಧ್ಯಕ್ಷ ರವೀಶ್ ತಂತ್ರಿ ಕುಂಟಾರು, ಬಿಡಿಜೆಎಸ್ ಕಣ್ಣೂರು ಜಿಲ್ಲಾ ಕಾರ್ಯದರ್ಶಿ ಕೆ. ಪ್ರಭಾಕರ, ಜಿಲ್ಲಾ ಉಪಾಧ್ಯಕ್ಷ ವಕೀಲ ಪಿ. ಕೆ. ವಿಜಯನ್, ಜಿPಲ್ಲಾ ಕಾರ್ಯದರ್ಶಿ ಪಿ. ಜೋಶಿ, ಎನ್ಡಿಎ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಶ್ವಿನಿ ಎಂ. ಎಲ್, ಬಿಡಿಜೆಎಸ್ ಮಹಿಳಾ ವಿಭಾಗದ ಕಾರ್ಯದರ್ಶಿ ಮೋಹಿನಿ ಹರೀಶ್, ಬಿಜೆಪಿ ಮುಖಂಡರಾದ ವಿ. ರವೀಂದ್ರನ್ ಮತ್ತು ಸತೀಶ್ಚಂದ್ರ ಭಂಡಾರಿ ಉಪಸ್ಥೀತರಿದ್ದರು.
ಬಿಡಿಜೆಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ಕೆ. ನಾರಾಯಣನ್ ಸ್ವಾಗತಿಸಿದರು. ಜಿಲ್ಲಾ ಸಮಿತಿ ಕೋಶಾಧಿಕಾರಿ ಕೆ. ಕುಞÂಕೃಷ್ಣನ್ ವಂದಿಸಿದರು.