ಪೆರ್ಲ: ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಾರ್ಷಿಕ ಜಾತ್ರೆಯ ಅಂಗವಾಗಿ ಅಯ್ಯಂಗಾಯಿ ದರ್ಶನಬಲಿ ಭಾನುವಾರ ಜರುಗಿತು. ಕಾರ್ಯಕ್ರಮದ ಅಂಗವಾಗಿ ರಾಮಚಂದ್ರಭಟ್ ಮತ್ತು ಬಳಗದವರಿಂದ ಭಕ್ತಿ ಸಂಗೀತ, ಜಗದೀಶ್ ಆಚಾರ್ಯ ಪುತ್ತೂರು ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ, ಶ್ರೀಭೂತಬಲಿ, ಕಟ್ಟೆಪೂಜೆ, ರಥೋತ್ಸವ ನಡೆಯಿತು.
ಇಂದು ಅವಭೃತಸ್ನಾನ:
ಮಾ. 25ರಂದು ಶ್ರೀದೇವರ ಅವಭೃತ ಸ್ನಾನ ನಡೆಯುವುದು. ಬೆಳಗ್ಗೆ ಕವಾಟೋದ್ಘಾಟನೆ, ಜಲದ್ರೋಣಿ ಪೂಜೆ, ಮಧ್ಯಾಹ್ನ 2ರಿಂದ ಬಿಂದು ಮತ್ತು ಅನುಪಮಾ ಬಳಗದವರಿಂದ ಭಕ್ತಿ ಭಜನ್ ಸಂಧ್ಯಾ ಕಾರ್ಯಕ್ರಮ, ಶ್ರೀದೇವರ ಬಲಿ, ಕಟ್ಟೆಪೂಜೆ, ಅವಭೃತ ಸ್ನಾನ, ದರ್ಶನಬಲಿ, ರಾಜಾಂಗಣ ಪ್ರಸಾದ, ಬಟ್ಟಲು ಕಾಣಿಕೆ, ಧ್ವಜಾವರೋಹಣ, ಮಂತ್ರಾಕ್ಷತೆ ನಡೆಯುವುದು. 26ರಂದು ಬೆಳಗ್ಗೆ 10ಕ್ಕೆ ಶ್ರೀ ಹುಲಿ ಭೂತದ ನೇಂ ನಡೆಯುವುದು.