HEALTH TIPS

ಹೈವೋಲ್ಟೇಜ್‌ ತಂತಿ ತಗುಲಿ ಬಸ್‌ಗೆ ಬೆಂಕಿ: ಐವರು ಸಾವು

             ಗಾಜಿಪುರ: ಹೈ ವೋಲ್ಟೇಜ್‌ ವಿದ್ಯುತ್‌ ತಂತಿ ತಗುಲಿ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದ್ದು, ಐವರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.

             ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಕುಟುಂಬವೊಂದು ಮದುವೆ ಕಾರ್ಯಕ್ರಮಗಳನ್ನು ಮುಗಿಸಿ ದೇವಸ್ಥಾನಕ್ಕೆ ತೆರಳುವ ವೇಳೆ ರಸ್ತೆಯ ಮೇಲೆ ಹಾದುಹೋದ ವಿದ್ಯುತ್‌ ತಂತಿ ಬಸ್‌ಗೆ ತಗುಲಿದ್ದು, ಬೆಂಕಿ ಹೊತ್ತಿಕೊಂಡಿದೆ.

              ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಥಳೀಯ ಎಸ್‌ಎಚ್‌ಒ ಧರ್ಮೇಂದ್ರ ಕುಮಾರ್‌ ಪಾಂಡೆ ಪಿಟಿಐಗೆ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ ₹50 ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries