ಮುಳ್ಳೇರಿಯ: ಅಡೂರಿನ ವಿದ್ಯಾಭಾರತಿ ವಿದ್ಯಾಲಯದಲ್ಲಿ ಕಾಸರಗೋಡು ಜಿಲ್ಲಾ ವಿಶ್ವಹಿಂದೂ ಪರಿಷತ್ ಹಾಗೂ ಅಡೂರಿನ ಶ್ರೀರಾಮೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ರಾಮನವಮಿಯ ಪ್ರಯುಕ್ತ ಎ.17ರಂದು ಬೆಳಗ್ಗೆ 9.30ರಿಂದ 11.30ರ ತನಕ ಶ್ರೀರಾಮೋತ್ಸವ ಕಾರ್ಯಕ್ರಮವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಈ ಸಂದರ್ಭದಲ್ಲಿ ಅಯೋಧ್ಯೆಯ ಶ್ರೀರಾಮನಿಗೆ ಅಭಿಷೇಕ ಮಾಡಿದ ತೀರ್ಥದ ವಿತರಣೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆ ತಿಳಿಸಿದೆ.