ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ-313 ಬಳಿ ಭಾರಿ ಭೂಕುಸಿತ ಸಂಭವಿಸಿದ್ದು, ಹೆದ್ದಾರಿ ಕುಸಿದಿದೆ. ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ-313 ಬಳಿ ಭಾರಿ ಭೂಕುಸಿತ ಸಂಭವಿಸಿದ್ದು, ಹೆದ್ದಾರಿ ಕುಸಿದಿದೆ. ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಹಾನಿಗೀಡಾದ ರಸ್ತೆಗಳ ದುರಸ್ತಿಗೆ ಜಿಲ್ಲಾಡಳಿತ ಕಾರ್ಮಿಕರನ್ನು ಮತ್ತು ಯಂತ್ರಗಳನ್ನು ಸ್ಥಳಕ್ಕೆ ಕಳುಹಿಸಿದ್ದು, ಕೆಲಸ ಪೂರ್ಣಗೊಳ್ಳಲು ಕೆಲವು ದಿನಗಳು ಬೇಕಾಗಬಹುದು ಎಂದು ಅನಿನಿ ಪ್ರದೇಶದ ಜಿಲ್ಲಾಧಿಕಾರಿ ದುರ್ಬಜ್ಯೋತಿ ಬೋರಾಹ್ ಅವರು ತಿಳಿಸಿದ್ದಾರೆ.