HEALTH TIPS

ಕಣದಿಂದ ಹಿಂದೆ ಸರಿದ ಭುಜಬಲ್

              ಮುಂಬೈ: ಎನ್‌ಸಿಪಿ ಹಿರಿಯ ಮುಖಂಡ ಮತ್ತು ಮಹಾರಾಷ್ಟ್ರ ಸರ್ಕಾರದ ಸಚಿವ ಛಗನ್ ಭುಜಬಲ್ ತಾವು ನಾಸಿಕ್ ಲೋಕಸಭಾ ಕ್ಷೇತ್ರದ ಟಿಕೆಟ್ ಬಯಸುವುದಿಲ್ಲ ಎಂದು ಘೋಷಿಸಿದ್ದಾರೆ. ಈ ಮೂಲಕ ಮಿತ್ರಪಕ್ಷ ಶಿವಸೇನಾದೊಂದಿಗೆ ಕ್ಷೇತ್ರದ ಟಿಕೆಟ್‌ಗಾಗಿ ನಡೆಯುತ್ತಿದ್ದ ಪೈಪೋಟಿಯನ್ನು ಅಂತ್ಯಗೊಳಿಸಿ, ಅದರ ಹಾದಿ ಸುಗಮಗೊಳಿಸಿದ್ದಾರೆ.

                 ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕ್ಷೇತ್ರದ ಅಭ್ಯರ್ಥಿಯ ಬಗ್ಗೆ ಚರ್ಚೆ ಮಾಡುವಾಗ ಸಮೀರ್ ಭುಜಬಲ್ ಹೆಸರು ಪ್ರಸ್ತಾಪವಾಯಿತು. ಆಗ, ನಾನು ಟಿಕೆಟ್ ಕೇಳದಿದ್ದರೂ, ಅಮಿತ್ ಶಾ ನನ್ನನ್ನು ಸ್ಪರ್ಧಿಸುವಂತೆ ಕೇಳಿದರು. ಆದರೆ, ಹಾಲಿ ಸಂಸದರು ತಮ್ಮ ಪಕ್ಷದವರಾದ್ದರಿಂದ ಕ್ಷೇತ್ರದ ಟಿಕೆಟ್ ತಮ್ಮ ಪಕ್ಷಕ್ಕೇ ಬೇಕು ಎಂದು ಮುಖ್ಯಮಂತ್ರಿ ಶಿಂದೆ ಒತ್ತಾಯಿಸಿದರು. ಗೊಂದಲ ನಿವಾರಿಸಲು ನಾನು ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದೆ' ಎಂದು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries