HEALTH TIPS

ಅಗಲ್ಪಾಡಿಯಲ್ಲಿ ಧನ್ವಂತರಿ ಹೋಮ ಸಂಪನ್ನ

                ಬದಿಯಡ್ಕ: ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ ಅಗಲ್ಪಾಡಿ ವತಿಯಿಂದ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ ಪ್ರಯುಕ್ತ ಶನಿವಾರ ಧನ್ವಂತರಿ ಹೋಮ ನಡೆಯಿತು.

              ಮುಂಜಾನೆ ಧನ್ವಂತರಿ ಹೋಮ ಪ್ರಾರಂಭವಾಗಿ ಪೂರ್ಣಾಹುತಿ ನಡೆಯಿತು. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಅಭಿಜ್ಞಾ ಭಟ್ ಬೊಳುಂಬು ಅವರಿಂದ ಹರಿಕಥೆ, ಎಂ.ಎಸ್.ಗಿರಿಧರ್ ಮತ್ತು ವಸುಧಾ ಮಂಗಳೂರು ಹಾಗೂ ಬಳಗದವರಿಂದ ದಾಸ ಸಿಂಚನ, ಕಾಂಞಂಗಾಡ್ ನಾಟ್ಯಧ್ವನಿ ಕಲಾಕ್ಷೇತ್ರ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಯಾಗದ ಪ್ರಯುಕ್ತ ಸುವಾಸಿನೀ ಹಾಗೂ ದಂಪತಿ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಬಳಿಕ ಮಹಾ ಮಂತ್ರಾಕ್ಷತೆ ನಡೆಯಿತು. ಸಂಜೆ ಶ್ರೀ ದೇವರಿಗೆ ಅಷ್ಟಾವಧಾನ ಸೇವೆ ನಡೆಯಿತು.

              ಮಾ.31ರಂದು ಮುಂಜಾನೆ ದುರ್ಗಾ ಸಪ್ತಶತೀ ಪಾರಾಯಣ, ಬೆಳಗ್ಗೆ ಕಲಶ ಪೀಠದಲ್ಲಿ ಮಹಾಪೂಜೆ, ಸಾಂಸ್ಕøತಿಕ ಕಾರ್ಯಕ್ರಮದ ಪ್ರಯುಕ್ತ ರಾತ್ರಿ ವಿದುಷಿ ಕೋವಿಲಡಿ ಆರ್.ಕಲಾ ಮೈಸೂರು ಅವರಿಗೆ ಗುರುವಂದನೆ, ಅಶ್ವಿನಿ ಕೋಳಿಕ್ಕಜೆ, ವಿದುಷಿ ಅರ್ಚನಾ ಎಲ್.ರಾವ್ ಮೈಸೂರು ಅವರಿಂದ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. 

            ಎ.1 ರಂದು ದುರ್ಗಾ ಸಪ್ತಶತೀ ಪಾರಾಯಣ, ಬೆಳಗ್ಗೆ 11.30 ಕ್ಕೆ ಕಲಶ ಪೀಠದಲ್ಲಿ ಮಹಾಪೂಜೆ ನಡೆಯಿತು. ಸಾಂಸ್ಕøತಿಕ ಕಾರ್ಯಕ್ರಮದಂಗವಾಗಿ ರಾತ್ರಿ 8 ರಿಂದ ವಿದ್ವಾನ್ ಚೆಂಗೋಟೈ ಹರಿಹರ ಸುಬ್ರಹ್ಮಣ್ಯ ಅಯ್ಯರ್ ಅವರಿಂದ ಸಂಗಿತ ಕಛೇರಿ (ಭಜನ್) ನಡೆಯಿತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries