HEALTH TIPS

ಪಾನೂರು ಬಾಂಬ್ ಸ್ಫೋಟ: ನಾಲ್ವರ ಬಂಧನ

                 ಕಣ್ಣೂರು: ಪಾನೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಸ್ಫೋಟ ಸಂಭವಿಸಿದಾಗ ಸ್ಥಳದಲ್ಲಿದ್ದವರನ್ನು ಬಂಧಿಸಲಾಗಿದೆ.

                ಅರುಣ್, ಅತುಲ್, ಶಿಬಿನ್ ಲಾಲ್ ಮತ್ತು ಸಾಯುಜ್ ಬಂಧಿತ ಆರೋಪಿಗಳು. ಕೂತುಪರಂಬ್ ಎಸಿಪಿ ನೇತೃತ್ವದ ತಂಡ ಅವರನ್ನು ಬಂಧಿಸಿದೆ. ಕೊಯಮತ್ತೂರಿಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಾಯುಜ್ ಪಾಲಕ್ಕಾಡ್ ನಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಪೋಲೀಸರು ತಿಳಿಸಿದ್ದಾರೆ.

               ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಹೆಚ್ಚಿನ ಜನರನ್ನು ಸಂಪರ್ಕಿಸುತ್ತಿದ್ದಾರೆ. ಗಾಯಗೊಂಡ ಸ್ಥಿತಿಯಲ್ಲಿ ಯಾರಾದರೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದ್ದಾರೆಯೇ ಎಂಬ ಬಗ್ಗೆಯೂ ಪೋಲೀಸರು ತನಿಖೆ ನಡೆಸುತ್ತಿದ್ದಾರೆ. ಸಮೀಪದ ಜಿಲ್ಲೆಗಳ ಆಸ್ಪತ್ರೆಗಳಲ್ಲೂ ಪೋಲೀಸರು ಕಣ್ಗಾವಲು ತೀವ್ರಗೊಳಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಎಂಟು ಮಂದಿಯನ್ನು ಈಗಾಗಲೇ ಗುರುತಿಸಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಸುಮಾರು ಹತ್ತು ಮಂದಿ ಇದ್ದರು ಎಂಬುದು ಪ್ರಾಥಮಿಕ ತೀರ್ಮಾನ.

             ಪಾನೂರು ಮೂಲಿಯಾಂತೋಡ್‍ನ ಮನೆಯೊಂದರಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಸ್ಫೋಟ ಸಂಭವಿಸಿತ್ತು. ಲಾಟರಿ ಮಾರಾಟಗಾರ ಮನೋಹರನ್ ಎಂಬುವರ ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಸಿಪಿಎಂ ಬೆಂಬಲಿಗ ಶೆರಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿನೀಶ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಂಬ್ ತಯಾರಿಕೆಗೆ ಯೋಜನೆ ರೂಪಿಸಿದ್ದು ಇವರೇ. ವಿನೀಶ್ ಕೂಡ ಸ್ಥಳೀಯ ಸಿಪಿಎಂ ಮುಖಂಡರೊಬ್ಬರ ಪುತ್ರ. ಅವರ ಮನೆಯ ಸಮೀಪವೇ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ವಿನೋದ್ ಮತ್ತು ಅಶ್ವತ್ ಕೂಡ ಗಾಯಗೊಂಡಿದ್ದಾರೆ. ಅವರು ಕೋಝಿಕ್ಕೋಡ್ ಮತ್ತು ಪರಿಯಾರಂ  ವೈದ್ಯಕೀಯ ಕಾಲೇಜಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

             ಆದರೆ ಆರೋಪಿಗಳಿಗೆ ಸಿಪಿಎಂ ಜತೆ ಯಾವುದೇ ಸಂಬಂಧವಿಲ್ಲ ಎಂಬುದು ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್ ತಿಳಿಸಿದ್ದಾರೆ.  ಈ ಗುಂಪಿನಲ್ಲಿ ಈಗಾಗಲೇ ಪಕ್ಷದಿಂದ ಉಚ್ಛಾಟಿಸಲ್ಪಟ್ಟ ಜನರು ಸೇರಿದ್ದಾರೆ ಎಂದು ಸಿಪಿಎಂ ಹೇಳಿಕೊಂಡಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries