HEALTH TIPS

ಇರಾನ್‌- ಇಸ್ರೇಲ್ ನಡುವೆ ಉದ್ವಿಗ್ನತೆ ಉಲ್ಬಣ: ಭಾರತ ಕಳವಳ

 ವದೆಹಲಿ: ಇರಾನ್ ಮತ್ತು ಇಸ್ರೇಲ್‌ ನಡುವೆ ಉದ್ವಿಗ್ನತೆ ಉಲ್ಬಣಗೊಳ್ಳುತ್ತಿರುವ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದ್ದು, ಇದು ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಹೇಳಿದೆ.


ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಭಾರತದ ವಿದೇಶಾಂಗ ಸಚಿವಾಲಯ, 'ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ಬೆದರಿಕೆಯೊಡ್ಡುತ್ತಿದೆ.

ಇದನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ. ಉದ್ವಿಗ್ನತೆ ತಗ್ಗಿಸುವ ಮೂಲಕ ಶಾಂತಿ ಮರಳಲು ಪ್ರಯತ್ನಿಸಬೇಕಿದೆ. ಹಿಂಸೆಯಿಂದ ಹಿಂದೆ ಸರಿದು ರಾಜತಾಂತ್ರಿಕ ಹಾದಿಗೆ ಮರಳಬೇಕು ಎಂದು ಭಾರತ ಕರೆ ನೀಡುತ್ತದೆ' ಎಂದು ಹೇಳಿದೆ.

'ಈ ಪ್ರದೇಶದಲ್ಲಿನ ಭಾರತದ ರಾಯಭಾರ ಕಚೇರಿಗಳು ಭಾರತೀಯ ಪ್ರಜೆಗಳೊಂದಿಗೆ ನಿಕಟ ಸಂಪರ್ಕದಲ್ಲಿವೆ' ಎಂದು ಅದು ತಿಳಿಸಿದೆ.

ವಿವೇಚನಾಶೀಲರಾಗಿ ಯೋಚಿಸುವ ಸಮಯ: ಡೆನ್ನಿಸ್‌ ಫ್ರಾನ್ಸಿಸ್‌

ಇರಾನ್-ಇಸ್ರೇಲ್ ಉದ್ವಿಗ್ನತೆ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಅಮೆರಿಕ ಜನರಲ್ ಅಸೆಂಬ್ಲಿ ಅಧ್ಯಕ್ಷ ಡೆನ್ನಿಸ್‌ ಫ್ರಾನ್ಸಿಸ್‌, 'ಮಧ್ಯಪ್ರಾಚ್ಯದಲ್ಲಿ ಬಿಗಡಾಯಿಸುತ್ತಿರುವ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳವಾಗುತ್ತಿದೆ. ಈ ಪ್ರದೇಶದಲ್ಲಿ ಮತ್ತಷ್ಟು ಉದ್ವಿಗ್ನತೆಯನ್ನು ತಪ್ಪಿಸಲು ಎರಡು ದೇಶಗಳು ಅತ್ಯಂತ ಸಂಯಮದಿಂದ ವರ್ತಿಸಬೇಕಿದೆ. ಈ ಪರಿಸ್ಥಿತಿಯಲ್ಲಿ ವಿವೇಚನಾಶೀಲರಾಗಿ ಯೋಚಿಸುವುದು ಬಹಳ ಮುಖ್ಯವಾಗಿದೆ. ಇದನ್ನು ಇಲ್ಲಿಗೆ ಮುಕ್ತಾಯಗೊಳಿಸುತ್ತಾರೆ ಎಂಬ ನಂಬಿಕೆಯಿದೆ' ಎಂದು ತಿಳಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries