HEALTH TIPS

ಲೋಕಸಭಾ ಚುನಾವಣಾ ಅಭ್ಯರ್ಥಿ ಹೃದಯಾಘಾತದಿಂದ ಸಾವು

 



ಮಧ್ಯಪ್ರದೇಶ: 
ಮಧ್ಯಪ್ರದೇಶದ ಬೇತುಲ್ ಲೋಕಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಭ್ಯರ್ಥಿ ಅಶೋಕ್ ಭಾಲವಿ ಮಂಗಳವಾರ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಶೋಕ್​ ಭಾಲವಿ ಮೃತ. ಮಧ್ಯಪ್ರದೇಶದ ಬೇತುಲ್​ ಕ್ಷೇತ್ರದಿಂದ ಮಾಯಾವತಿಯವರ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಅಶೋಕ್​ ಭಾಲವಿ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದರು.

ಆದರೆ ಹೃದಯಾಘಾತಕ್ಕೆ ಅಶೋಕ್​ ನಿಧನರಾಗಿದ್ದಾರೆ. ಭಾಲವಿ ಅವರ ನಿಧನದಿಂದಾಗಿ ಈ ಹಿಂದೆ ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ನಡೆಯಬೇಕಿದ್ದ ಕ್ಷೇತ್ರದ ಚುನಾವಣೆಯನ್ನು 1951ರ ಸೆಕ್ಷನ್​ 52ರ ಅಡಿಯಲ್ಲಿ ಮುಂದೂಡಲಾಗಿದೆ.

ಅಶೋಕ್ ಭಾಲವಿ ಸಾವಿನ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ರವಾನಿಸಲಾಗಿದ್ದು, ಅದರ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನರೇಂದ್ರ ಕುಮಾರ್ ಸುರ್ವ್ಯವಂಶಿ ತಿಳಿಸಿದ್ದಾರೆ.

ಅಶೋಕ್​​ ಭಾಲವಿಯವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಅಶೋಕ್​ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದರು ಎಂದು ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries