ಪಿಲಿಭಿತ್ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ಪ್ರಣಾಳಿಕೆಯು ಮುಸ್ಲಿಂ ಲೀಗ್ನದು, ಅವರ ಸ್ವಂತದ್ದಲ್ಲ ಎಂದು ಹೇಳಿದರು.
ಕಾಂಗ್ರೆಸ್ ಪ್ರಣಾಳಿಕೆಯು ಮುಸ್ಲಿಂ ಲೀಗ್ನ ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆಗಳ ಕುರಿತು ಈಗಾಗಲೇ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣಕ್ಕೆ ಜನರು ಕೊಡುಗೆ ನೀಡಿದ್ದಾರೆ. ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾ ಸಮಾರಂಭ ಜನವರಿ 22 ರಂದು ನಡೆಯಿತು. ಇಂಡಿಯಾ ಮೈತ್ರಿಕೂಟದ ಪಕ್ಷಗಳು ರಾಮಮಂದಿರ ನಿರ್ಮಾಣವನ್ನು ಯಾವಾಗಲೂ ದ್ವೇಷಿಸುತ್ತವೆ. ರಾಮ ಪ್ರಾಣ ಪ್ರತಿಷ್ಠಾಪನೆಗೆ ಸಂಘಟಕರು ಗೌರವಯುತವಾಗಿ ಆಹ್ವಾನಿಸಿದಾಗ, ನೀವು (ವಿಪಕ್ಷ ನಾಯಕರು) ಆಹ್ವಾನವನ್ನು ತಿರಸ್ಕರಿಸಿ ಶ್ರೀರಾಮನನ್ನು ಅವಮಾನಿಸಿದಿರಿ. ಸಮಾರಂಭದಲ್ಲಿ ಪಾಲ್ಗೊಂಡ ಅವರ ಪಕ್ಷದವರೇ ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತುಗೊಂಡಿದ್ದಾರೆ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದಲ್ಲಿ ಮುಳುಗಿದ್ದು, ಅದರಿಂದ ಹೊರಬರಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.
ಪಾಪ ಮಾಡಿದವರನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ತುಷ್ಟೀಕರಣದ ರಾಜಕೀಯದಿಂದಾಗಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿವೆ. ನೆರೆಯ ದೇಶಗಳಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಭಾರತವು ಪೌರತ್ವವನ್ನು ನೀಡದಿದ್ದರೆ, ಬೇರೆ ಯಾರು ನೀಡುತ್ತಾರೆ? ಎಂದು ಪ್ರಶ್ನಿಸಿದರು.
ದೇಶದ ಹಲವೆಡೆ ಇಂದು ಹೊಸ ವರ್ಷಾಚರಣೆ ನಡೆಯುತ್ತಿದೆ. ಇಂದಿನಿಂದ ಚೈತ್ರ ನವರಾತ್ರಿಯೂ ಆರಂಭವಾಗಿದೆ. ಎಲ್ಲರೂ ಭಕ್ತಿಯಲ್ಲಿ ಮುಳುಗಿ 'ಶಕ್ತಿ'ಯನ್ನು ಆರಾಧಿಸುತ್ತಿರುವಾಗ ರ್ಯಾಲಿಗೆ ಇಷ್ಟು ದೊಡ್ಡ ಮಟ್ಟದ ಬೆಂಬಲ ಸಿಕ್ಕಿರುವುದು ವಿಸ್ಮಯವಾಗಿದೆ. ನೀವೆಲ್ಲರೂ ನಮಗೆ ನಿಮ್ಮ ಆಶೀರ್ವಾದವನ್ನು ನೀಡಲು ಇಲ್ಲಿಗೆ ಬಂದಿದ್ದೀರಿ. ಸಂದೇಶವು ಸ್ಪಷ್ಟವಾಗಿದೆ. ಒಂದೇ ಒಂದು ವಿಷಯ ಮಾತ್ರ ಕೇಳಬೇಕು ಅದೇನೆಂದರೆ, 'ಫಿರ್ ಏಕ್ ಬಾರ್, ಮೋದಿ ಸರ್ಕಾರ' ಎಂದು ಅವರು ಹೇಳಿದರು.