HEALTH TIPS

ಇವಿಎಂ ಕಾರ್ಯಾರಂಭದ ಬಗ್ಗೆ ಸುಳ್ಳು ಪ್ರಚಾರ ವಿರುದ್ಧ ಕಠಿಣ ಕ್ರಮ-ಜಿಲ್ಲಾಧಿಕಾರಿ

              ಕಾಸರಗೋಡು: ಲೋಕಸಭಾ ಕ್ಷೇತ್ರದಲ್ಲಿ ಇವಿಎಂ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡುವ ಆಡಿಯೋ ಸಂದೇಶಗಳು ಹರಿದಾಡುತ್ತಿರುವುದು ಗಮನಕ್ಕೆ ಬಂದಿದ್ದು, ಚುನಾವಣಾ ಕಾರ್ಯಚಟುವಟಿಕೆಗೆ ಧಕ್ಕೆಯಾಗುವ ರೀತಿಯಲ್ಲಿ ಸುಳ್ಳು ಪ್ರಚಾರ ನಡೆಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ. ಇನ್ಬಾಶೇಖರ್ ತಿಳಿಸಿದ್ದಾರೆ.

             ಈಗಾಗಲೇ ಹರಿದಾಡುತ್ತಿರುವ ಧ್ವನಿ ಸಂದೇಶದ ಫೆÇರೆನ್ಸಿಕ್ ಪರೀಕ್ಷೆಯನ್ನು ನಡೆಸುವಂತೆ ಜಿಲ್ಲಾ ಪೆÇಲೀಸ್ ಮುಖ್ಯಸ್ಥರಿಗೆ ತಿಳಿಸಲಾಗಿದೆ. ಕಾಸರಗೋಡು ಕ್ಷೇತ್ರದ ಎಲ್ಲಾ ಚುನಾವಣಾ ಚಟುವಟಿಕೆಗಳು ಪಾರದರ್ಶಕವಾಗಿದ್ದು, ಇವಿಎಂ ಕಾರ್ಯಾರಂಭದ ಬಗ್ಗೆ ಆಧಾರ ರಹಿತ ಹಾಗೂ ಸುಳ್ಳು ವದಂತಿಗಳನ್ನು ಜನತೆ ನಂಬಬಾರದು ಎಂದು ಜಿಲ್ಲಾಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries