ಕಾಸರಗೋಡು: ಜಿಲ್ಲಾ ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಕೆ ಬಾಲಕೃಷ್ಣನ್ ಅವರನ್ನು ಆಲಪ್ಪುಳ ಜಿಲ್ಲಾ ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಧೀಶರಾಗಿ ವರ್ಗಾಯಿಸಲಾಗಿದೆ. ಕಾಸರಗೋಡು ಹಳೇ ಸೂರ್ಲಿನ ಮದ್ರಸಾ ಶಿಕ್ಷಕ, ಮೂಲತ: ಕೊಡಗು ನಿವಾಸಿ ಮಹಮ್ಮದ್ ರಿಯಾಸ್ ಮೌಲವಿ ಕೊಲೆ ಪ್ರಕರಣದ ತೀರ್ಪು ಹೊರ ಬಿದ್ದ ಕೆಲವೇ ದಿವಸಗಳಲ್ಲಿ ಈ ವರ್ಗಾವಣೆ ನಡೆದಿದೆ.
ಕೆ.ಕೆ ಬಾಲಕೃಷ್ಣನ್ ಅವರು 2023 ಆ. 1ರಂದು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡಿದ್ದರು. ತೆರವಾಗಿರುವ ಇವರ ಜಾಗಕ್ಕೆ ಕೇರಳ ಹೈಕೋರ್ಟಿನ ಕಂಪ್ಯೂಟರ್ ಐಟಿ ವಿಭಾಗದ ರಿಜಿಸ್ಟ್ರಾರ್ ಹಾಗೂ ಜಿಲ್ಲಾ ನ್ಯಾಯಾಧೀಶರಾಗಿರುವ ಜಿ. ಗೋಪಕುಮಾರ್ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಇವರು ಈ ಹಿಂದೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು.