HEALTH TIPS

ಬಿಜೆಪಿ ಅಭ್ಯರ್ಥಿ, ತಮ್ಮ ಪುತ್ರ ಅನಿಲ್‌ ಸೋಲಬೇಕು ಎಂದು ಶಾಪ ಹಾಕಿದ ಕೇರಳ ಮಾಜಿ ಸಿಎಂ ಎಕೆ ಆಂಟನಿ

ತಿರುವನಂತಪುರಂ: ಇತ್ತೀಚೆಗೆಷ್ಟೇ ಬಿಜೆಪಿಗೆ ಸೇರಿರುವ ತಮ್ಮ ಪುತ್ರ ಅನಿಲ್ ಆಂಟನಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇರಳ ಮಾಜಿ ಸಿಎಂ ಎ.ಕೆ. ಆಂಟನಿ ಅವರು ಬಿಜೆಪಿ ಅಭ್ಯರ್ಥಿ ಹಾಗೂ ತಮ್ಮ ಪುತ್ರ ಅನಿಲ್‌ ಚುನಾವಣೆಯಲ್ಲಿ ಸೋಲಬೇಕು ಎಂದು ಶಾಪ ಹಾಕಿದ್ದಾರೆ.

ಇಂದು ತಿರುವನಂತಪುರಂನಲ್ಲಿರುವ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎ.ಕೆ.ಆಂಟನಿ, ಪ್ರಚಾರಕ್ಕೆ ತೆರಳಲು ಸಾಧ್ಯವಾಗದಿದ್ದರೂ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

''ಕಾಂಗ್ರೆಸ್‌ನ ಪ್ರಮುಖ ನಾಯಕರ ಮಕ್ಕಳು ಬಿಜೆಪಿ ಸೇರುವುದು ತಪ್ಪು. ಮಕ್ಕಳ ಬಗ್ಗೆ ಮಾತನಾಡಲು ನಾನು ಇಷ್ಟ ಪಡುವುದಿಲ್ಲ. ಕೆಎಸ್‌ಯು ಕಾಲದಿಂದಲೂ ಕುಟುಂಬ, ರಾಜಕೀಯ ಎರಡೂ ಬೇರೆ ಬೇರೆ ಎಂಬುದು ನನ್ನ ನಿಲುವು. ಕಾಂಗ್ರೆಸ್‌ ನನ್ನ ಧರ್ಮ. ಕೇರಳದಲ್ಲಿ ಬಿಜೆಪಿಯ ಸುವರ್ಣ ವರ್ಷಗಳು ಮುಗಿದಿವೆ. 2019 ರ ಸಂಸತ್ ಚುನಾವಣೆಯಲ್ಲಿ ಶಬರಿಮಲೆ ಮಹಿಳೆಯರ ಪ್ರವೇಶ ವಿಚಾರವಾಗಿ ಬಿಜೆಪಿಗೆ ಸುವರ್ಣ ವರ್ಷವಾಗಿತ್ತು. 2024 ರ ಚುನಾವಣೆಯಲ್ಲಿ ಬಿಜೆಪಿಯು ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಮೂರನೇ ಸ್ಥಾನ ಪಡೆಯಲಿದೆ" ಎಂದರು.

ಆದರೆ, ತಮ್ಮ ತಂದೆ ಆಂಟನಿ ಅವರ ಟೀಕೆಗೆ ಪ್ರತಿಕ್ರಿಯಿಸಿದ ಅನಿಲ್ ಆಂಟೋನಿ ಅವರು ತಮ್ಮ ತಂದೆಯ ಬಗ್ಗೆ ಕರುಣೆ ಇದೆ. ಪಟ್ಟನಂತಿಟ್ಟದಲ್ಲಿ ತಾವು ಗೆಲುವು ಸಾಧಿಸಲಿದೆ ಎಂದು ಹೇಳಿದರು.

ಕಾಂಗ್ರೆಸ್ ದೇಶವಿರೋಧಿ ಸಂಘಟನೆ ಎಂದು ಟೀಕಿಸಿದ ಅನಿಲ್ ಆಂಟನಿ, ಹಳೆಯ ವಿಚಾರಗಳನ್ನು ಹೊಂದಿರುವ ಕೆಲವು ನಾಯಕರು ಸೋನಿಯಾ ಗಾಂಧಿ ಮತ್ತು ಅವರ ಕುಟುಂಬಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೇರಳದ ಪಟ್ಟನಂತಿಟ್ಟ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅನಿಲ್ ಆಂಟನಿ ಸ್ಪರ್ಧಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries