ನವದೆಹಲಿ: ಲೋಕಸಭೆ ಚುನಾವಣೆ ಗೆದ್ದು ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಚುನಾವಣಾ ಬಾಂಡ್ ಮರಳಿ ಜಾರಿಗೆ ತರಲಾಗುವುದು ಎಂಬ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
0
samarasasudhi
ಏಪ್ರಿಲ್ 21, 2024
ನವದೆಹಲಿ: ಲೋಕಸಭೆ ಚುನಾವಣೆ ಗೆದ್ದು ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಚುನಾವಣಾ ಬಾಂಡ್ ಮರಳಿ ಜಾರಿಗೆ ತರಲಾಗುವುದು ಎಂಬ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 'ಪೇ ಪಿಎಂ' ಹಗರಣದ ಮೂಲಕ ಸಾರ್ವಜನಿಕರ ಸುಮಾರು ₹4 ಲಕ್ಷ ಕೋಟಿ ಹಣವನ್ನು ಬಿಜೆಪಿ ಲೂಟಿ ಮಾಡಿರುವುದು ನಮಗೆ ತಿಳಿದಿದೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲಾ ಪಾಲುದಾರರೊಂದಿಗೆ ಸಮಾಲೋಚಿಸಿ ಚುನಾವಣಾ ಬಾಂಡ್ಗಳನ್ನು ಮರಳಿ ತರಲು ಬಿಜೆಪಿ ಉದ್ದೇಶಿಸಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ 'ಹಿಂದೂಸ್ತಾನ್ ಟೈಮ್ಸ್'ಗೆ ತಿಳಿಸಿದ್ದರು.
ಚುನಾವಣಾ ಬಾಂಡ್ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಫೆಬ್ರುವರಿಯಲ್ಲಿ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್ನ ಆದೇಶದಂತೆ ಚುನಾವಣಾ ಬಾಂಡ್ ಪಡೆದವರ ಮಾಹಿತಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಂಚಿಕೊಂಡಿತ್ತು.