HEALTH TIPS

ಕಸಾಪ ಕೇರಳ ಗಡಿನಾಡ ಘಟಕದಿಂದ ಹಿರಿಯ ಸಾಹಿತಿ ಮಲಾರ್ ಜಯರಾಮರೈ ಅವರಿಗೆ ಸನ್ಮಾನ

                  ಕುಂಬಳೆ: ಕನ್ನಡ ಭಾಷೆ ಮತ್ತು ಸಂಸ್ಕøತಿಗಾಗಿ ದುಡಿದ ಹಿರಿಯರನ್ನು ಗೌರವಿಸುವ  ಉದ್ದೇಶದಿಂದ ಕನ್ನಡ  ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕವು ಆರಂಭಿಸಿದ ' ಸಾಹಿತ್ಯ ಪರಿಷತ್ತಿನ ನಡಿಗೆ ಕನ್ನಡದ ಹಿರಿಯ  ಸಾಧಕರ ಕಡೆಗೆ' ಎಂಬ ಕಾರ್ಯಕ್ರಮದಂಗವಾಗಿ ಹಿರಿಯ ಪತ್ರಕರ್ತ, ತುಳು-ಕನ್ನಡ ಸಾಹಿತಿ ಮಲಾರ್ ಜಯರಾಮ ರೈ ಅವರನ್ನು ಶಿರಿಯಾದ ಅಡ್ಕದಲ್ಲಿರುವ ಅವರ ನಿವಾಸದಲ್ಲಿ ಅಭಿನಂದಿಸಲಾಯಿತು.

                ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅವರು ಮಲಾರ್ ಜಯರಾಮ ರೈ ದಂಪತಿನ್ನು ಶಾಲು ಹೊದಿಸಿ  ಫಲಪುಷ್ಪ,ಸ್ಮರಣಿಕೆ ನೀಡಿ ಗೌರವಿಸಿದರು. ಪರಿಷತ್ತಿನ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರ್  ಅಭಿನಂದನಾ ಭಾಷಣ ಮಾಡಿದರು.ಪತ್ರಿಕಾ ರಂಗಕ್ಕೆ, ಧಾರ್ಮಿಕ ರಂಗಕ್ಕೆ,ತುಳು ಮತ್ತು ಕನ್ನಡಭಾಷೆ, ಸಂಸ್ಕೃತಿಗೆ  ಮಲಾರ್ ಜಯರಾಮ ರೈನೀಡಿದ ಕೊಡುಗೆ ಅಪಾರವಾದುದು ಎಂದು ಅವರು ಹೇಳಿದರು. ಪತ್ರಕರ್ತ ಎಂ.ನಾ ಚಂಬಲ್ತಿಮಾರ್, ಉಪನ್ಯಾಸಕ ಸುರೇಶ್ ಶೆಟ್ಟಿ, ಶಿಕ್ಷಕಿ ಸಾಯಿ ಈಶ್ವರಿ, ಸಾಯಿಭದ್ರಾ ರೈ ಶಿರಿಯ, ಸಾಯಿ ಧನ್ಯಶ್ರೀ ಉಪಸ್ಥಿತರಿದ್ದರು.  

             ಕನ್ನಡ  ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ರಾಮಚಂದ್ರ ಭಟ್ ಧರ್ಮತ್ತಡ್ಕ ವಂದಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries