ಕಾಸರಗೋಡು : ಲೋಕಸಭಾ ಕ್ಷೇತ್ರದ ಅಗತ್ಯ ಸೇವಾ ಮತದಾರರಿಗೆ (ಎವಿಇಎಸ್) ಅಂಚೆ ಮತದಾನ ಏ. 21ರಿಂದ ಆರಂಭವಾಗಲಿದೆ. ಈ ಹಿಂದೆ ಅರ್ಜಿ ಸಲ್ಲಿಸಿದವರು ವಿಧಾನಸಭಾ ಕ್ಷೇತ್ರವಾರು ಸ್ಥಾಪಿಸಿರುವ ಅಂಚೆ ಮತ ಕೇಂದ್ರಗಳಲ್ಲಿ ಮತದಾನ ಮಾಡಬಹುದಾಗಿದೆ.
ಚುನಾವಣಾ ಆಯೋಗವು ಅನುಮೋದಿಸಿದ ಯಾವುದೇ ಗುರುತಿನ ಚೀಟಿಯನ್ನು ಹೊಂದಿರಬೇಕು. ಮತದಾನ ಕೇಂದ್ರವು ಬೆಳಗ್ಗೆ ಒಂಬತ್ತರಿಂದ ಸಂಜೆ ಐದರವರೆಗೆ ಕಾರ್ಯನಿರ್ವಹಿಸಲಿದೆ ಎಂದು ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಮಾಹಿತಿ ನೀಡಿದರು.
ಮಂಜೇಶ್ವರ ಕ್ಷೇತ್ರದಲ್ಲಿ ಜಿಎಚ್ಎಸ್ಎಸ್ ಕುಂಬಳೆ, ಕಾಸರಗೋಡು ಕ್ಷೇತ್ರದಲ್ಲಿ ಕಾಸರಗೋಡು ಸರ್ಕಾರಿ ಕಾಲೇಜು, ಉದುಮ ಕ್ಷೇತ್ರದಲ್ಲಿ ಚೆಮ್ನಾಡ್ ಜಮಾ ಅತ್ ಹೈಯರ್ ಸೆಕೆಂಡರಿ ಶಾಲೆ, ಕಾಞಂಗಾಡ್ ಕ್ಷೇತ್ರದಲ್ಲಿ ದುರ್ಗಾ ಹೈಯರ್ ಸೆಕೆಂಡರಿ ಶಾಲೆ ಕಾಞಂಗಾಡ್, ತೃಕರಿಪುರ ಕ್ಷೇತ್ರದಲ್ಲಿ ಸ್ವಾಮಿ ನಿತ್ಯಾನಂದ ಪಾಲಿಟೆಕ್ನಿಕ್, ಪಯ್ಯನ್ನೂರು ಕ್ಷೇತ್ರದಲ್ಲಿ ಎ. ಕುಞÂರಾಮನ್ ಆದಿಯೋಡಿ ಸ್ಮಾರಕ ಜಿವಿಎಚ್ಎಸ್ಎಸ್ ಪಯ್ಯನ್ನೂರು ಮತ್ತು ಕಲ್ಯಾಶ್ಯೇರಿ ಕ್ಷೇತ್ರದಲ್ಲಿ ಕೆಪಿಆರ್ ಸ್ಮಾರಕ ಎಚ್ಎಸ್ಎಸ್ ಕಲ್ಯಾಶ್ಯೇರಿಯಲ್ಲಿ ಮತದಾನ ಕೇಂದ್ರ ಕಾರ್ಯಾಚರಿಸುತ್ತಿದೆ. ಈ ಕೇಂದ್ರಗಳು ಸತತ ಮೂರು ದಿನಗಳ ಕಾಲ ಕಾರ್ಯನಿರ್ವಹಿಸಲಿವೆ. ಈ ಯಾವುದೇ ದಿನಗಳಲ್ಲಿ ಅರ್ಜಿ ಸಲ್ಲಿಸಿದ ಮತದಾರರು ಕೇಂದ್ರಕ್ಕೆ ತೆರಳಿ ಮತ ಚಲಾಯಿಸಬಹುದು.