HEALTH TIPS

'ಸಿಎಂ ಮೋಸ ಮಾಡಿದ್ದಾರೆ, ನ್ಯಾಯಕ್ಕಾಗಿ ಹೋರಾಟ ನಡೆಸ್ತೇನೆ': ಕೇರಳದಲ್ಲಿ ರ‍್ಯಾಗಿಂಗ್​ಗೆ ಬಲಿಯಾದ ವಿದ್ಯಾರ್ಥಿ ತಂದೆ ಎಚ್ಚರಿಕೆ

             ತಿರುವನಂತಪುರಂ: ವಯನಾಡಿನ ಪೂಕೋಡ್‌ನಲ್ಲಿರುವ ಕೇರಳ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪುರುಷರ ಹಾಸ್ಟೆಲ್‌ನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವಿದ್ಯಾರ್ಥಿ ಜೆಎಸ್ ಸಿದ್ಧಾರ್ಥನ್ ಸಾವಿಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಎಲ್‌ಡಿಎಫ್ ಸರ್ಕಾರ ಹೆಚ್ಚಿನ ಪ್ರತಿಭಟನೆಗಳನ್ನು ಎದುರಿಸುವ ಸಾಧ್ಯತೆ ಕಂಡುಬರುತ್ತಿದೆ.

              ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸುಳ್ಳು ಭರವಸೆ ನೀಡಿ ವಂಚಿಸಿದ್ದಾರೆ ಎಂದು ಮೃತ ಸಿದ್ದಾರ್ಥನ ತಂದೆ ಜಯಪ್ರಕಾಶ್ ಭಾನುವಾರ ಆರೋಪಿಸಿದ್ದಾರೆ.

              ಪ್ರಕರಣದ ಕುರಿತು ಸಿಬಿಐ ತನಿಖೆಗೆ ಸರ್ಕಾರ ಆದೇಶಿಸಿದ್ದರೂ, ಕೇಂದ್ರ ಸಂಸ್ಥೆ ತನಿಖೆಯನ್ನು ಇನ್ನೂ ವಹಿಸಿಕೊಂಡಿಲ್ಲ. ಹೀಗಾಗಿ ಸಿಬಿಐ ತನಿಖೆ ವಿಳಂಬವಾಗುತ್ತಿರುವುದಕ್ಕೆ ಸಿಟ್ಟಿಗೆದ್ದ ಜಯಪ್ರಕಾಶ್, ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ತನಿಖೆಯನ್ನು ಬುಡಮೇಲು ಮಾಡಿ ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.

                ಕೆಲವು ಹುಡುಗಿಯರು ರ‍್ಯಾಗಿಂಗ್ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ. ಪ್ರಕರಣದಲ್ಲಿ ಭಾಗಿಯಾದವರನ್ನು ವಿಚಾರಣೆಗೆ ಒಳಪಡಿಸಬೇಕು. ಆದರೆ ಅವರ ವಿರುದ್ಧ ಕಾಲೇಜು ಆಗಲಿ, ಪೊಲೀಸರಾಗಲಿ ಕ್ರಮ ಕೈಗೊಂಡಿಲ್ಲ. ಸಿಪಿಎಂ ನಾಯಕ ಎಂ.ಎಂ. ಮಣಿ ಆರೋಪಿಗಳಲ್ಲಿ ಒಬ್ಬನಾದ ಅಕ್ಷಯ್‌ನನ್ನು ತನ್ನ ಬಳಿ ಇಟ್ಟುಕೊಂಡಿದ್ದಾನೆ. ಸಿಎಂ ನಿವಾಸಕ್ಕೆ ತೆರಳಿ ಈ ಎಲ್ಲ ವಿಷಯ ಪ್ರಸ್ತಾಪಿಸುತ್ತೇನೆ. ನನ್ನ ಮಗನಿಗೆ ನ್ಯಾಯ ಕೊಡಿಸಲು ನಾನು ಯಾವುದೇ ಹಂತಕ್ಕೆ ಹೋಗಲು ಸಿದ್ಧ ಎಂದು ಹೇಳಿದರು.
               ಹಾಸ್ಟೆಲ್‌ನಲ್ಲಿ ಎಂಟು ತಿಂಗಳ ಕಾಲ ಸಿದ್ದಾರ್ಥನ್ ಚಿತ್ರಹಿಂಸೆಗೊಳಗಾಗಿದ್ದಾನೆ. ಈ ಅವಧಿಯಲ್ಲಿ ಎಸ್‌ಎಫ್‌ಐನ ರಾಜ್ಯಾಧ್ಯಕ್ಷ ಅರ್ಶೋ ಹಾಸ್ಟೆಲ್‌ಗೆ ನಿತ್ಯ ಭೇಟಿ ನೀಡುತ್ತಿದ್ದ. ನನ್ನ ಮಗನ ಮೇಲಿನ ದೌರ್ಜನ್ಯದ ಹಿಂದೆ ಅವನ ಕೈವಾಡವಿದೆ. ಈ ಪ್ರಕರಣದಲ್ಲಿ ಪೊಲೀಸರು ಆತನನ್ನು ಬಂಧಿಸಬೇಕೆಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದರು.

             ಜಯಪ್ರಕಾಶ್ ಪ್ರಕರಣವನ್ನು ಸಿಬಿಐಗೆ ವಹಿಸುವಲ್ಲಿ ಗೃಹ ಇಲಾಖೆಯ ಲೋಪವನ್ನು ಪ್ರಶ್ನಿಸಿದರು. ಪ್ರಕರಣದ ಸಿಬಿಐ ತನಿಖೆಗೆ ಕೋರಿರುವ ರಾಜ್ಯ ಸರ್ಕಾರದ ಆದೇಶವನ್ನು ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯದ ಬದಲಿಗೆ ಕೊಚ್ಚಿಯ ಸಿಬಿಐ ಕಚೇರಿಗೆ ರವಾನಿಸಲಾಗಿದೆ. ಇಂತಹ ಸಂಚಲನದ ಪ್ರಕರಣದ ದಾಖಲೆಗಳನ್ನು ನಿರ್ವಹಿಸುವಾಗ ಅಧಿಕಾರಿಗಳು ಎಚ್ಚರ ವಹಿಸುತ್ತಿಲ್ಲ ಎಂದು ಆರೋಪಿಸಿದರು.

                ವಯನಾಡ್‌ನ ಪೂಕೋಡ್‌ನಲ್ಲಿರುವ ಕೇರಳ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದ ಜೆ.ಎಸ್. ಸಿದ್ಧಾರ್ಥನನ್ ಫೆಬ್ರವರಿ 18 ರಂದು ತೀವ್ರ ರ‍್ಯಾಗಿಂಗ್ ಮತ್ತು ಗ್ರೂಪ್​ ಎಕ್ಸ್​ಪೆರಿಮೆಂಟ್​ಗಳನ್ನು ಅನುಭವಿಸಿದ ನಂತರ ಶವವಾಗಿ ಪತ್ತೆಯಾಗಿದ್ದ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries