'ಸಿಎಎ ಅನ್ನು ಪ್ರಣಾಳಿಕೆಯಲ್ಲಿ ಉಲ್ಲೇಖಿಸದೇ ಉದ್ದೇಶಪೂರ್ವಕವಾಗಿಯೇ ಹೊರಗಿಡಲಾಗಿದೆ. ಹಲವು ಕಾನೂನುಗಳನ್ನು ಉಲ್ಲೇಖಿಸಿ ಅವುಗಳನ್ನು ಹಿಂಪಡೆಯುವುದಾಗಿ ಭರವಸೆ ನೀಡಿರುವ ಕಾಂಗ್ರೆಸ್, ಸಿಎಎ ಬಗ್ಗೆ ಮಾತನಾಡಲು ಭಯಪಡುತ್ತಿದೆ' ಎಂದು ಹೇಳಿದ್ದಾರೆ.
'ಸಂವಿಧಾನದ 15,16,25,26,28,29 ಹಾಗೂ 30ನೇ ಪರಿಚ್ಛೇದದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಿಗೆ ನೀಡಲಾಗಿರುವ ಮೂಲಭೂತ ಹಕ್ಕುಗಳ ರಕ್ಷಣೆ ಮಾಡುವುದಾಗಿ ಪ್ರಣಾಳಿಕೆಯ 8ನೇ ಪುಟದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಈ ಸಂಬಂಧ ಸಿಎಎಯಲ್ಲಿ ಇರುವ ಯಾವುದರ ಬಗ್ಗೆಯೂ ಕಾಂಗ್ರೆಸ್ ಚಕಾರವೆತ್ತಿಲ್ಲ' ಎಂದು ಹೇಳಿದ್ದಾರೆ.
'ಸಿಎಎಯು ಸಂವಿಧಾನದ 14ನೇ ಪರಿಚ್ಛೇದವನ್ನು ಉಲ್ಲಂಘಿಸುತ್ತದೆ. ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 14ನೇ ಪರಿಚ್ಛೇದದ ಉಲ್ಲೇಖವೇ ಇಲ್ಲ' ಎಂದು ಹೇಳಿದರು.
'ಕಾರ್ಮಿಕರು, ರೈತರು, ಕ್ರಿಮಿನಲ್ ನ್ಯಾಯ, ಪರಿಸರ, ಅರಣ್ಯ ಮತ್ತು ಡಿಜಿಟಲ್ ದತ್ತಾಂಶ ರಕ್ಷಣೆ ಮುಂತಾದ ಜನವಿರೋಧಿ ಕಾನೂನುಗಳನ್ನು ರದ್ದು ಮಾಡುವುದಾಗಿ ಕಾಂಗ್ರೆಸ್ ಭರವಸೆಯಿತ್ತಿದೆ. ಇದಕ್ಕೆ ನಮ್ಮ ಬೆಂಬಲವಿದೆ' ಎಂದು ಅವರು ಹೇಳಿದ್ದಾರೆ.