HEALTH TIPS

ಮೋದಿ ಸರ್ಕಾರ 25 ಕೋಟಿ ಮಂದಿಯನ್ನು ಬಡತನ ರೇಖೆಗಿಂತ ಮೇಲೆತ್ತಿದೆ: ರಾಜನಾಥ ಸಿಂಗ್‌

           ಸಂಭಲ್‌ಪುರ : ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ 25 ಕೋಟಿಯಷ್ಟು ಜನರನ್ನು ಬಡತನ ರೇಖೆಗಿಂತ ಮೇಲಕ್ಕೆತ್ತಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಹೇಳಿದ್ದಾರೆ.

             ಸಂಭಲ್‌ಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪರ ರೈರಾಖೋಲ್ ಎಂಬಲ್ಲಿ ನಡೆಸಿದ ಚುನಾವಣಾ ಸಮಾವೇಶದಲ್ಲಿ ಅವರು ಮಾತನಾಡಿದರು.

               'ಜವಾಹರಲಾಲ್ ನೆಹರೂ ಅವರಿಂದ ಮೊದಲ್ಗೊಂಡು ಇಂದಿರಾ ಗಾಂಧಿ, ಮನಮೋಹನ್‌ ಸಿಂಗ್ ಅವರು ಸೇರಿ ದೇಶದಲ್ಲಿ ಬಡತನವನ್ನು ನಿರ್ಮೂಲನೆಗೊಳಿಸಲು ವಿಫಲರಾಗಿದ್ದಾರೆ. ಆದರೆ ದೇಶದಲ್ಲಿ ಬಡತನದ ಸಂಕಟವನ್ನು ಕಡಿಮೆ ಮಾಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ‍' ಎಂದು ಅವರು ಹೇಳಿದ್ದಾರೆ.

             'ದೇಶದ ಜನರಿಗೆ ಕಳೆದ 10 ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಕ್ಕಾ ಮನೆ, ಮನೆಗಳಿಗೆ ಪೈಪ್ ನೀರು, ಉಚಿತ ಅಡುಗೆ ಅನಿಲ, ಉಚಿತ ಆಹಾರ, ಶೌಚಾಲಯ ಹಾಗೂ ಇನ್ನಿತರ ಸೌಕರ್ಯಗಳನ್ನು ಒದಗಿಸಿದ್ದಾರೆ' ಎಂದು ನುಡಿದಿದ್ದಾರೆ.

            'ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಭರವಸೆ ನೀಡಿ ಅದನ್ನು ಸಕಾರಗೊಳಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ಈಗ ಬಾಲರಾಮ ದೇಗುಲಕ್ಕೆ ಬಂದಿದ್ದು, ರಾಮ ರಾಜ್ಯ ನಿರ್ಮಾಣ ಮಾಡಲಾಗುತ್ತಿದೆ' ಎಂದರು ಹೇಳಿದ್ದಾರೆ.

              'ಒಡಿಶಾದ ಬಿಜೆಡಿ ಸರ್ಕಾರವು ಜನರಿಗೆ ಉಚಿತ ಆರೋಗ್ಯ ಸೇವೆ ನೀಡುವ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಒಡಿಶಾದ ಜನರಿಗೆ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸಲಿದ್ದೇವೆ. ಬಡವರಿಗೆ ಕಲ್ಯಾಣ ಯೋಜನೆಗಳು ಲಭ್ಯವಾಗಬೇಕಾದರೆ ಕಮಲ ಚಿಹ್ನೆಗೆ ಮತ ಹಾಕಿ' ಎಂದು ಮನವಿ ಮಾಡಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries