HEALTH TIPS

ಲೋಕಸಭೆ ಚುನಾವಣೆ : ಜೂನ್‌ 4ರ ಬಳಿಕ 'ಇಂಡಿಯಾ' ಮೈತ್ರಿಕೂಟದಲ್ಲಿ ಬಿರುಕು: ಮೋದಿ

             ಪ್ರತಾಪ್‌ಗಢ: ಜೂನ್‌ 4ರ ಬಳಿಕ 'ಇಂಡಿಯಾ' ಮೈತ್ರಿಕೂಟದಲ್ಲಿ ಬಿರುಕು ಕಾಣಿಸಲಿದೆ. ಲೋಕಸಭೆ ಚುನಾವಣೆಯ ಸೋಲಿಗೆ ಕಾರಣ ಯಾರೆಂದು ಮತ್ತು ಯಾರನ್ನು ಬಲಿಪಶು ಮಾಡಬಹುದು ಎಂಬ ಚರ್ಚೆಗಳು ನಡೆಯುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

               ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಅಮೇಠಿಯಿಂದ ಹಿಂದೆ ಸರಿದಿರುವ ರಾಹುಲ್‌ ಗಾಂಧಿ, ರಾಯ್‌ಬರೇಲಿಯಲ್ಲಿ ಸೋಲನ್ನು ಅನುಭವಿಸಲಿದ್ದಾರೆ ಎಂದು ಹೇಳಿದ್ದಾರೆ.

'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಐವರನ್ನು ಪ್ರಧಾನಿ ಹುದ್ದೆಗೇರಿಸುವ ಚಿಂತನೆ ಮಾಡಿದೆ. 'ವಿರೋಧ ಪಕ್ಷಗಳು ಮೂರಂಕಿಯ ಸ್ಥಾನಗಳನ್ನು ಪಡೆಯುವ ಅಥವಾ ಅಧಿಕಾರದ ಸನಿಹ ತಲುಪುವ ಸಾಧ್ಯತೆಯೇ ಇಲ್ಲ. ಆದರೂ, ಅವಕಾಶ ಲಭಿಸಿದರೆ ಐದು ವರ್ಷಗಳಲ್ಲಿ ಐವರನ್ನು ಪ್ರಧಾನಿ ಹುದ್ದೆಯಲ್ಲಿ ಕೂರಿಸಲು ಯೋಜನೆ ಹಾಕಿಕೊಂಡಿವೆ' ಎಂದು ತಿಳಿಸಿದ್ದಾರೆ.

            'ಶ್ರೀಮಂತ ಕುಟುಂಬದಲ್ಲಿ ಜನಿಸಿರುವ ರಾಹುಲ್‌ ಗಾಂಧಿ ಅವರಿಗೆ ದೇಶ ನಡೆಸಲು ಆಗುವುದಿಲ್ಲ. ಇದು ಅವರಿಗೆ ಅಸಾಧ್ಯದ ಕೆಲಸ' ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್‌ ವಿರುದ್ಧ ಕಿಡಿಕಾರಿರುವ ಮೋದಿ, ಲಖನೌ ಮತ್ತು ದೆಹಲಿ ರಾಜಕುಮಾರರು ಬೇಸಿಗೆ ರಜೆಯಲ್ಲಿ ವಿದೇಶಕ್ಕೆ ತೆರಳುತ್ತಾರೆ ಎಂದು ಆರೋಪಿಸಿದ್ದಾರೆ.

                ಲೋಕಸಭೆ ಚುನಾವಣೆಯ ಏಳು ಹಂತಗಳ ಮತ ಎಣಿಕೆಯು ಜೂನ್ 4ರಂದು ನಡೆಯಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries