HEALTH TIPS

ಬಿಸಿಲ ಬೇಗೆ: ಮತ್ತಿಬ್ಬರು ಬಲಿ: ಪಾಲಕ್ಕಾಡ್ ನ 56 ರ ಹರೆಯದ ಮಹಿಳೆ ಕುಸಿದು ಬಿದ್ದು ಸಾವು

                 ಪಾಲಕ್ಕಾಡ್: 56 ವರ್ಷದ ಮಹಿಳೆಯೊಬ್ಬರು ಬಸ್‍ಗಾಗಿ ಕಾಯುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ತೆಂಕರ ಮೂಲದ ಸರೋಜಿನಿ ಮೃತರು.

               ಶಾಲೆ ಬಳಿಯ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಪಾಲೇನಕರಜ ರಾಜಮ್ಮ ಕುಸಿದು ಬಿದ್ದಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಸ್ಥಳೀಯರು ಸಮೀಪದ ಕ್ಲಿನಿಕ್‍ಗೆ ದಾಖಲಿಸಿ ಅಲ್ಲಿಂದ ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲಾಗಲಿಲ್ಲ.

            ಇಂದು ಬೆಳಗ್ಗೆ ಪಾಲಕ್ಕಾಡ್ ನಲ್ಲೂ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಮನ್ನಾರ್ಕೋಡ್ ಮೂಲದ ಆರ್ ಶಬರೀಶ್ ಮೃತರು. ಸ್ನೇಹಿತರೊಂದಿಗೆ ನಿಂತಿದ್ದಾಗ ಅನಾರೋಗ್ಯದಿಂದ ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ ಮೃತಪಟ್ಟಿದ್ದರು.

         ಪಾಲಕ್ಕಾಡ್ ಜಿಲ್ಲೆ ಹೆಚ್ಚು ಶಾಖವನ್ನು ಅನುಭವಿಸುತ್ತಿದೆ. ಬಿಸಿಲಿನ ತಾಪ ಹೆಚ್ಚಿರುವ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ ಮೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ. ಇಂದು ಮತ್ತು ನಾಳೆ ಪಾಲಕ್ಕಾಡ್, ತ್ರಿಶೂರ್ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಿಸಿಲಿನ ಝಳದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries