HEALTH TIPS

ನಾಯಿ ದಾಳಿಗೆ ವೃದ್ಧ ಸಾವು: ₹7.5 ಲಕ್ಷ ಪರಿಹಾರ ನೀಡಲು ಸೂಚನೆ

            ವದೆಹಲಿ: ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಮ್‌ಯು) ಆವರಣದಲ್ಲಿ ಕಳೆದ ವರ್ಷ ಬೀದಿ ನಾಯಿಗಳ ದಾಳಿಯಿಂದ 65 ವರ್ಷದ ವೃದ್ಧ ಮೃತಪಟ್ಟಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹೇಳಿದೆ.

             ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅಯೋಗ, ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ₹7.5 ಲಕ್ಷ ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು ಎಂಟು ವಾರಗಳ ಒಳಗಾಗಿ ಹಣ ಪಾವತಿ ಮಾಡಿರುವ ದಾಖಲೆಗಳನ್ನು ಒದಗಿಸುವಂತೆ ಸೂಚಿಸಿರುವುದಾಗಿ ತಿಳಿಸಿದೆ.

               ಕಳೆದ ವರ್ಷದ ಏಪ್ರಿಲ್‌ನಲ್ಲಿ ವಿ.ವಿ ಆವರಣದಲ್ಲಿರುವ ಉದ್ಯಾನದಲ್ಲಿ ಸಫ್ದರ್‌ ಅಲಿ ಖಾನ್‌ (65) ಎಂಬುವವರು ಮುಂಜಾನೆ ವಾಕಿಂಗ್‌ಗೆ ತೆರಳಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿದ್ದವು. ತೀವ್ರವಾಗಿ ಗಾಯಗೊಂಡಿದ್ದ ಸಫ್ದರ್‌ ಮೃತಪಟ್ಟಿದ್ದರು. ನಾಯಿಗಳು ದಾಳಿ ನಡೆಸಿದ್ದ ದೃಶ್ಯಾವಳಿಯ ವಿಡಿಯೊವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries