ಕುಂಬಳೆ: ಗ್ರಾಮ ಪಂಚಾಯಿತಿ ಸಹಿತ ವಿವಿಧ ಸ್ಥಳೀಯಾಡಳಿತ ಸಂಸ್ಥೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಳೆಗಾಲ ಪೂರ್ವ ಸ್ವಚ್ಛತಾ ಆಂದೋಲನದ ಅಂಗವಾಗಿ ಶುಚೀಕರಣ ಕಾರ್ಯ ಭಾನುವಾರ ನಡೆಯಿತು. ಹಸಿರು ಕ್ರಿಯಾಸೇನೆ, ಎಂ.ಜಿ.ಎನ್.ಆರ್.ಇ.ಜಿಎಸ್ ಕಾರ್ಯಕರ್ತರು, ಎನ್ನೆಸ್ಸೆಸ್ ಸ್ವಯಂಸೇವಕರು ಹಾಗೂ ಸಾರ್ವಜನಿಕರು ಶುಚೀಕರಣ ಕಾರ್ಯದಲ್ಲಿ ಭಾಗವಹಿಸಿದ್ದರು. ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ನೇತೃತ್ವದಲ್ಲಿ ವಿವಿಧ ಸ್ಥಳೀಯಾಡಳಿತ ಸಂಸ್ಥೆಗಳು ನವಕೇರಳ ಮಿಷನ್ ಕ್ರಿಯಾ ಯೋಜನೆ ಹಾಗೂ ಜಿಲ್ಲಾ ಸ್ವಚ್ಛತಾ ಮಿಷನ್ ಸೂಚನೆ ಮೇರೆಗೆ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪಂಚಾಯಿತಿಗಳಲ್ಲಿ ಮುಂದಿನ ದಿನಗಳಲ್ಲೂ ಸ್ವಚ್ಛತಾ ಕಾರ್ಯ ಮುಮದುವರಿಯಲಿದೆ.
ಜಿಲ್ಲೆಯ ಮೊದಲ ದಿನ ಮೂರು ನಗರಸಭೆಗಳು ಮತ್ತು 30 ಗ್ರಾಮ ಪಂಚಾಯಿತಿಗಳ ಸುಮಾರು 500 ಕೇಂದ್ರಗಳನ್ನು ವಾರ್ಡ್ ಮಟ್ಟದ ಶುಚಿತ್ವ ಸಮಿತಿ ವತಿಯಿಂದ ಸಾಮೂಹಿಕವಾಗಿ ಸ್ವಚ್ಛಗೊಳಿಸಲಾಯಿತು.
(ಪೋಟೋ : ಕುಂಬಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ರಸ್ತೆಗಳ ಶುಚೀಕರಣ.)

.jpg)
