HEALTH TIPS

ಸಾಹಿತಿ ವೈ. ಸತ್ಯನಾರಾಯಣ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಭಿನಂದನೆ

             ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನಾಚರಣೆಯಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ವತಿಯಿಂದ ಹಿರಿಯ ಸಾಹಿತಿ ವೈ.ಸತ್ಯನಾರಾಯಣ ಕಾಸರಗೋಡು ಅವರಿಗೆ  ಅಭಿನಂದನಾ ಸಮಾರಂಭ ನಡೆಯಿತು. ವಿದ್ವಾನ್ ಎಸ್.ಬಿ ಖಂಡಿಗೆ,ಪೆರ್ಲ ಅವರು ಸತ್ಯನಾರಾಯಣ ಅವರಿಗೆ  ಶಾಲು ಹೊದಿಸಿ,  ಫಲಪುಷ್ಪ,ಸ್ಮರಣಿಕೆನೀಡಿ ಗೌರವಿಸಿದರು. 

             ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸನ್ಮಾನಿತರ ಪರಿಚಯ ಮಾಡಿದರು.

              ಮೀಯಪದವು ಹೈಯರ್ ಸೆಕೆಂಡರಿ ಶಾಲಾ ಪ್ರಾಂಶುಪಾಲ ರಮೇಶ, ಮುಖ್ಯ ಶಿಕ್ಷಕ ರಾಜಾರಾಮ ರಾವ್.ಟಿ, ಪ್ರಾಧ್ಯಾಪಕ ಹರೀಶ .ಜಿ, ಶಿಕ್ಷಕರಾದ ಅಬ್ದುಲ್ ರಶೀದ್ ,ರಾಜಾರಾಮ, ಸ್ವಪ್ನ.ಯಂ ಉಪಸ್ಥಿತರಿದ್ದರು.  ಅನುಜ್ಞಾಲಕ್ಷ್ಮಿ.ಪಿ, ಅನನ್ಯ.ಪಿ ಪ್ರಾರ್ಥನೆ ಹಾಡಿದರು. ಗೌರವ ಕಾರ್ಯದರ್ಶಿ ಶೇಖರಶೆಟ್ಟಿ ಬಾಯಾರು ಸ್ವಾಗತಿಸಿದರು. ಗೌ.ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ವಂದಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries